Thursday, August 13, 2026
Thursday, August 13, 2026

ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು ರಾಷ್ಟ್ರಭಕ್ತರಾಗಬೇಕು- ಈಶ್ವರಪ್ಪ

Date:

ರಾಷ್ಟ್ರ ಭಕ್ತ ಮುಸಲ್ಮಾನರು ತಮ್ಮ ಮಕ್ಕಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಇಲ್ಲದಿದ್ದಲ್ಲಿ ಅವರು ಕೊಲೆ ಮಾಡಲು ಹೋಗಿ ಜೈಲು ಸೇರುತ್ತಾರೆ, ಇಲ್ಲವೇ ಭಯೋತ್ಪಾದಕ ಸಂಘಟನೆ ಜೊತೆ ಸೇರಿ ಜೈಲು ಸೇರುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಪೊಲೀಸರು ಒಳ್ಳೆಯ ಕೆಲಸ ಮಾಡಿದ್ದಾರೆ. ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಬಾಂಬ್ ಬ್ಲಾಸ್ಟ್ ಮಾಡಲೂ ಇಬ್ಬರು ಶಂಕಿತರು ಯೋಜನೆ ಮಾಡಿಕೊಂಡಿದ್ದರು ಎನ್ನುವುದು ಆತಂಕಕಾರಿ‌. ಎಸ್ ಡಿಪಿಐ, ಪಿಎಫ್ ಐ ರಾಷ್ಟ್ರದ್ರೋಹಿ ಸಂಘಟನೆಗಳು. ಮುಸ್ಲಿಂ ಯುವಕರನ್ನು ಇಸ್ಲಾಮಿಕ್ ಸ್ಟೇಟ್ಸ್ ಜೊತೆ ಸೇರಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಈ ಬಗ್ಗೆ ಮುಸ್ಲಿಂ ಸಮುದಾಯದ ಹಿರಿಯರು ಎಚ್ಚರಿಕೆ ವಹಿಸಬೇಕು ಎಂದರು.

ನಲಪಾಡ್ ಉದ್ಯೋಗವಿಲ್ಲದ ಕಾರಣದಿಂದ ಯುವಕರು ದುಷ್ಕೃತ್ಯಕ್ಕೆ ಇಳಿಯುತ್ತಿದ್ದಾರೆ ಎಂದಿದ್ದಾರೆ. ಕೇವಲ ಮುಸ್ಲಿಂ ಸಮುದಾಯದ ಯುವಕರು ಮಾತ್ರ ಇಂಥ ದುಷ್ಕೃತ್ಯದಲ್ಲಿ ತೊಡಗುತ್ತಾರೆ. ಬೇರೆ ಯಾವ ಯುವಕರು ಈ ರೀತಿಯ ಕೃತ್ಯಗಳಲ್ಲಿ‌ಭಾಗಿಯಾಗುವುದಿಲ್ಲ. ಈ ನಲಪಾಡ್ ಜೈಲಿಗೆ ಹೋಗಿಬಂದಿರುವ ವ್ಯಕ್ತಿ. ಈತ ಕಾಂಗ್ರೆಸ್ ನಾಯಕ. ಆತನನ್ನು ಕಾಂಗ್ರೆಸ್ ನಲ್ಲಿ ಇಟ್ಟುಕೊಳ್ಳುವ ಬಗ್ಗೆ ಕಾಂಗ್ರೆಸ್ ಇನ್ನೊಮ್ಮೆ ಆಲೋಚಿಸಬೇಕು. ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು. ರಾಷ್ಟ್ರಭಕ್ತರಾಗಬೇಕು. ರಾಷ್ಟ್ರದ್ರೋಹಿಗಳಿಗೆ ಬುದ್ದಿಹೇಳುವ ಕೆಲಸವನ್ನು ಮುಸ್ಲಿಂ ಸಮುದಾಯದ ಹಿರಿಯರು ಮಾಡಬೇಕು ಎಂದು ಈಶ್ವರಪ್ಪ ಅವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...