Monday, March 23, 2026
Monday, March 23, 2026

ಕಾನೂನು ಬಾಹಿರ ಚಟುವಟಿಕೆ :ರಾಜ್ಯದಾದ್ಯಂತ 40 ಕ್ಕೂ ಹೆಚ್ಚು ಮಂದಿ ಬಂಧನ

Date:

ರಾಜ್ಯಾದ್ಯಂತ ಏಕಕಾಲದಲ್ಲಿ ಕರ್ನಾಟಕ ಪೊಲೀಸರು ಪಿಎಫ್‌ಐ ಕಚೇರಿ, ನಾಯಕರ ನಿವಾಸದ ಮೇಲೆ ದಾಳಿಯನ್ನು ನಡೆಸಿದ್ದಾರೆ. ಕಾನೂನುಬಾಹಿರ ಚಟುವಟಿಕೆಯಲ್ಲಿ ಶಾಮೀಲಾದ ಅನುಮಾನದ ಮೇಲೆ 40ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ.

ಕಾನೂನು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಪಿಎಫ್‌ಐ ನಾಯಕ ನಿವಾಸದ ಮೇಲೆ ದಾಳಿಯನ್ನು ನಡೆಸಿದ್ದಾರೆ. ಮಂಗಳೂರು, ಬಾಗಲಕೋಟೆ, ರಾಮನಗರ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮಂತರ, ಕೋಲಾರ, ಮೈಸೂರು, ಚಾಮರಾಜನಗರದಲ್ಲೂ ಬೆಳ್ಳಂಬೆಳಗ್ಗೆ ಪೊಲೀಸರು ದಾಳಿಯನ್ನು ನಡೆಸಿ 40ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ತನಿಖೆಯನ್ನು ನಡೆಸುತ್ತಿದ್ದಾರೆ.

ಪಿಎಫ್‌ಐ ಮೇಲೆ ಕೆಲದಿನಗಳ ಹಿಂದೆಯಷ್ಟೆ ಎನ್‌ಐಎ, ಇಡಿ, ರಾಜ್ಯ ಪೊಲೀಸರ ಸಹಕಾರದೊಂದಿಗೆ ದೇಶದಾದ್ಯಂತ ಮಹತ್ವದ ಕಾರ್ಯಾಚರಣೆಯನ್ನು ನಡೆಸಲಾಗಿತ್ತು. ಈ ದಾಳಿ ಸಮಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆಲವು ಕಾರ್ಯಕರ್ತರು ಸಕ್ರಿಯವಾಗಿ ಪ್ರತಿಭಟನೆಯನ್ನು ನಡೆಸಿದ್ದರು. ಇವರ ಮೇಲೂ ಸಾಕಷ್ಟು ಅನುಮಾನಗಳು ಉಂಟಾದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸರು ದಾಳಿಯನ್ನು ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...