ರಾಜ್ಯಾದ್ಯಂತ ಏಕಕಾಲದಲ್ಲಿ ಕರ್ನಾಟಕ ಪೊಲೀಸರು ಪಿಎಫ್ಐ ಕಚೇರಿ, ನಾಯಕರ ನಿವಾಸದ ಮೇಲೆ ದಾಳಿಯನ್ನು ನಡೆಸಿದ್ದಾರೆ. ಕಾನೂನುಬಾಹಿರ ಚಟುವಟಿಕೆಯಲ್ಲಿ ಶಾಮೀಲಾದ ಅನುಮಾನದ ಮೇಲೆ 40ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ.
ಕಾನೂನು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಪಿಎಫ್ಐ ನಾಯಕ ನಿವಾಸದ ಮೇಲೆ ದಾಳಿಯನ್ನು ನಡೆಸಿದ್ದಾರೆ. ಮಂಗಳೂರು, ಬಾಗಲಕೋಟೆ, ರಾಮನಗರ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮಂತರ, ಕೋಲಾರ, ಮೈಸೂರು, ಚಾಮರಾಜನಗರದಲ್ಲೂ ಬೆಳ್ಳಂಬೆಳಗ್ಗೆ ಪೊಲೀಸರು ದಾಳಿಯನ್ನು ನಡೆಸಿ 40ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ತನಿಖೆಯನ್ನು ನಡೆಸುತ್ತಿದ್ದಾರೆ.
ಪಿಎಫ್ಐ ಮೇಲೆ ಕೆಲದಿನಗಳ ಹಿಂದೆಯಷ್ಟೆ ಎನ್ಐಎ, ಇಡಿ, ರಾಜ್ಯ ಪೊಲೀಸರ ಸಹಕಾರದೊಂದಿಗೆ ದೇಶದಾದ್ಯಂತ ಮಹತ್ವದ ಕಾರ್ಯಾಚರಣೆಯನ್ನು ನಡೆಸಲಾಗಿತ್ತು. ಈ ದಾಳಿ ಸಮಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆಲವು ಕಾರ್ಯಕರ್ತರು ಸಕ್ರಿಯವಾಗಿ ಪ್ರತಿಭಟನೆಯನ್ನು ನಡೆಸಿದ್ದರು. ಇವರ ಮೇಲೂ ಸಾಕಷ್ಟು ಅನುಮಾನಗಳು ಉಂಟಾದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸರು ದಾಳಿಯನ್ನು ನಡೆಸಿದ್ದಾರೆ.