Thursday, October 3, 2024
Thursday, October 3, 2024

ತಾಂತ್ರಿಕ ಕಾರಣದಿಂದ ಹೊಸ ಬಿಪಿಎಲ್ ಕಾರ್ಡ್ ವಿತರಣೆಯಾಗಿಲ್ಲ

Date:

ರಾಜ್ಯದಲ್ಲಿ ವಿವಿಧ ಕಾರಣಗಳಿಂದಾಗಿ ಈಗಾಗಲೇ ಲಕ್ಷಾಂತರ ಕಾರ್ಡ್ ಗಳನ್ನು ಸರ್ಕಾರ ರದ್ದುಗೊಳಿಸಿದೆ.

ಈ ನಡುವೆಯೂ ಹೊಸ ಬಿಪಿಎಲ್ ಕಾರ್ಡ್ ಗಳಿಗಾಗಿ ಅರ್ಜಿ ಸಲ್ಲಿಸುತ್ತಿರೋರ ಸಂಖ್ಯೆ ಏನೂ ಕಡಿಮೆ ಆಗಿಲ್ಲ.
ಆದ್ರೇ ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸಿ, ಆದ್ರೇ ಕಾರ್ಡ್ ಬಂತೋ ಇಲ್ಲವೋ, ಬರುತ್ತೋ ಇಲ್ಲವೇ ಎಂಬುದನ್ನು ಮಾತ್ರ ಕೇಳ ಬೇಡಿ ಎಂಬುದಾಗಿ ಆಹಾರ ಇಲಾಖೆ ಹೇಳುತ್ತಿದೆ.

ಹೌದು.. ರಾಜ್ಯದಲ್ಲಿ ಈವರೆ 3.11 ಲಕ್ಷ ಕುಟುಂಬಗಳು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಹೀಗೆ ಸಲ್ಲಿಕೆಯಾದಂತ ಕಾರ್ಡ್ ಗಳನ್ನು ಪರಿಶೀಲಿಸಿ, ಅರ್ಹರಿಗೆ ವಿತರಿಸಬೇಕಾದಂತ ಸರ್ಕಾರ ಮಾತ್ರ, ಯಾವುದೇ ಒಪ್ಪಿಗೆ ಸೂಚಿಸದ ಕಾರಣ, ವಿತರಣೆಯಾಗಿಲ್ಲ.

ರಾಜ್ಯ ಸರ್ಕಾರದ ಈ ನಿರ್ಧಾರದಿಂದಾಗಿ ಬಡವರು, ಕೂಲಿ ಕಾರ್ಮಿಕರು ಸೇರಿದಂತೆ ಅನೇಕ ಅರ್ಹ ಕುಟುಂಬಗಳು ಆಹಾರ ಧಾನ್ಯವಿಲ್ಲದೇ, ಬಿಪಿಎಲ್ ಕಾರ್ಡ್ ನಿಂದ ವಂಚಿತವಾಗಿ ದಿನದೂಡುವಂತೆ ಆಗಿದೆ. ಇದಷ್ಟೇ ಅಲ್ಲದೇ ಬಿಪಿಎಲ್ ಕಾರ್ಡ್ ಇದ್ದರೇ ಉಚಿತ ಚಿಕಿತ್ಸೆ ಸೌಲಭ್ಯ ಕೂಡ ಸಿಗದೇ, ಪರದಾಡುವಂತೆ ಆಗಿದೆ.

ಅಂದಹಾಗೇ ರಾಜ್ಯದಲ್ಲಿ 1.26 ಕೋಟಿ ಬಿಪಿಎಲ್ ಕಾರ್ಡ್ ಗಳಿದ್ದಾವೆ. ಹೊಸ ಕಾರ್ಡ್ ಯಾಕೆ ವಿತರಣೆ ಮಾಡುತ್ತಿಲ್ಲ ಎಂಬುದಾಗಿ ಆಹಾರ ಇಲಾಖೆಯ ಕಾರ್ಯದರ್ಶಿ ಡಾ.ಎಂ.ಟಿ ರೇಜು ಅವರನ್ನು ಕೇಳಿದ್ರೇ, ಸರ್ಕಾರದ ಅನುಮತಿಗಾಗಿ ಕಾಯುತ್ತಿದ್ದೇವೆ. ರಾಜ್ಯ ಸರ್ಕಾರ ಅನುಮತಿ ಕೊಟ್ಟಿಲ್ಲ.

ಹೀಗಾಗಿ ಸದ್ಯಕ್ಕೆ ಯಾವುದೇ ತೀರ್ಮಾನ ಕೈಗೊಳ್ಳೋದಕ್ಕೆ ಆಗದೇ, ಹೊಸ ಕಾರ್ಡ್ ವಿತರಣೆ ಆಗಿಲ್ಲ. ಆದ್ರೇ ಹೊಸ ಕಾರ್ಡ್ ಗಾಗಿ ಅರ್ಜಿಯನ್ನು ಸಾರ್ವಜನಿಕರು ಸಲ್ಲಿಸಬಹುದಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...

B.Y.Raghavendra ಸಾರ್ವಜನಿಕ ಉದ್ಯಮಗಳು & ಗೃಹ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕವಾಗಿರುವ ಸಂಸದ ರಾಘವೇಂದ್ರರಿಗೆ ಅಭಿನಂದನೆ

B.Y.Raghavendra ಕೇಂದ್ರ ಸರ್ಕಾರದ ಸಂಸದೀಯ ಸಂಸ್ಥೆಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿ,...

Mahatma Gandhi ಗಾಂಧಿ ಟೋಪಿ ಧಾರಣೆ ಕೇವಲ ತೋರಿಕೆಯಾಗಬಾರದು. ಆದರ್ಶಗಳ ಪಾಲನೆಯಾಗಬೇಕು-ಡಾ.ಎಚ್.ಬಿ.ಮಂಜುನಾಥ್.

Mahatma Gandhi ಗಾಂಧಿ ಟೋಪಿಯನ್ನು ಧರಿಸುವುದು ಕೇವಲ ತೋರಿಕೆಯಾಗದೆ ಮಹಾತ್ಮರ ಆದರ್ಶಗಳ...