Friday, December 5, 2025
Friday, December 5, 2025

ಭಾರತ 2047ರ ವೇಳೆಗೆ ಸಮೃದ್ಧ ಹಾಗೂ ಬಲಿಷ್ಠ ರಾಷ್ಟ್ರವಾಗಲಿದೆ- ದ್ರೌಪದಿ ಮುರ್ಮು

Date:

ಬೆಂಗಳೂರು ಏರೋಸ್ಪೇಸ್ ವಿಭಾಗ ಆಯೋಜಿಸಿದ್ದ ಏಕೀಕೃತ ಕ್ರಯೋಜನಿಕ್ ಇಂಜಿನ್ ಉತ್ಪಾದನಾ ಸೌಲಭ್ಯ (ಐಸಿಎಂಎಫ್) ಉದ್ಘಾಟಿಸಿ ಮಾತನಾಡಿದರು. ಮುಂದಿನ 25 ವರ್ಷಗಳಲ್ಲಿ ಭಾರತ ಅಮೃತ ಕಾಲವನ್ನು ಪ್ರವೇಶಿಸುವುದರಿಂದ ಭವಿಷ್ಯದಲ್ಲಿ ಎಚ್​ಎಎಲ್ ಮತ್ತು ಇಸ್ರೋ ಸಂಸ್ಥೆಗಳು ಮಹತ್ವದ ಮತ್ತು ಸಕಾರಾತ್ಮಕ ಪಾತ್ರ ನಿರ್ವಹಿಸುತ್ತವೆ ಎಂದು ತಿಳಿಸಿದರು.

ಎಚ್​ಎಎಲ್ ಮತ್ತು ಇಸ್ರೋ ಜಂಟಿಯಾಗಿ ಇಡೀ ದೇಶಕ್ಕೆ ಅತ್ಯಾಧುನಿಕ ಸೌಲಭ್ಯ ಹೊಂದಲು ಕ್ರಯೋಜೆನಿಕ್ ಮತ್ತು ಸೆಮಿ-ಕ್ರಯೋಜೆನಿಕ್ ಎಂಜಿನ್​ಗಳನ್ನು ತಯಾರಿಸುತ್ತಿವೆ. ಭಾರತವು ಈ ಸಾಮರ್ಥ್ಯ ಹೊಂದಿರುವ ವಿಶ್ವದ 6ನೇ ದೇಶವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಐಸಿಎಂಎಫ್ ಉದ್ಘಾಟನೆ ಎಚ್​ಎಎಲ್ ಮತ್ತು ಇಸ್ರೋಗೆ ಮಾತ್ರವಲ್ಲ ಇಡೀ ದೇಶಕ್ಕೆ ಐತಿಹಾಸಿಕ ಕ್ಷಣ. ರಕ್ಷಣಾ ಕ್ಷೇತ್ರದಲ್ಲಿ ಭಾರತ ಆರ್ತನಿರ್ಭರವಾಗಲು ಎಚ್​ಎಎಲ್ ಅಪಾರ ಕೊಡುಗೆ ನೀಡಿದೆ. ಸಂಶೋಧನೆ, ಅಭಿವೃದ್ಧಿ ಮತ್ತು ವಿವಿಧ ಏರ್​ಕ್ರಾಫ್ಟ್ ಪ್ಲಾಟ್​ಫಾಮರ್್​ಗಳ ತಯಾರಿಕೆಯಲ್ಲಿ ತನ್ನ ಸಾಮರ್ಥ್ಯವನ್ನು ಮತ್ತೆ ಮತ್ತೆ ಪ್ರದರ್ಶಿಸಿದೆ ಎಂದು ಶ್ಲಾಘಿಸಿದರು. ಕಾರ್ಯತಂತ್ರದ ರಕ್ಷಣೆ ಮತ್ತು ಅಭಿವೃದ್ಧಿಗೆ ಎಚ್​ಎಎಲ್ ಮತ್ತು ಇಸ್ರೋ ಜತೆಯಾಗಿ ಕೊಡುಗೆ ನೀಡುತ್ತಿವೆ. ರಕ್ಷಣಾ ಸಂಬಂಧಿತ ಉಪಕರಣಗಳನ್ನು ತಯಾರಿಸುವ ಶ್ರೇಷ್ಠ ದರ್ಜೆಯ ಸೌಲಭ್ಯ ಹೊಂದಿರುವ ಎಚ್​ಎಎಲ್ ದೇಶಕ್ಕೆ ಅಮೂಲ್ಯ ಆಸ್ತಿ ಎಂದರು. ಇದೇ ಸಂದರ್ಭದಲ್ಲಿ ರಾಷ್ಟ್ರಪತಿಗಳು ದಕ್ಷಿಣ ವಲಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಯ ಶಂಕುಸ್ಥಾಪನೆ ನೆರವೇರಿಸಿದರು.

ರಾಜ್ಯಪಾಲ ಗೆಹಲೋತ್, ಕೇಂದ್ರ ಸಚಿವೆ ಭಾರತಿ ಪ್ರವೀಣ್ ಪವಾರ್, ಎಚ್​ಎಎಲ್ ಅಧ್ಯಕ್ಷ ಸಿ.ಬಿ.ಅನಂತಕೃಷ್ಣನ್, ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ಸಚಿವ ಡಾ.ಕೆ.ಸುಧಾಕರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...