Sunday, August 23, 2026
Sunday, August 23, 2026

ಭಾರತ 2047ರ ವೇಳೆಗೆ ಸಮೃದ್ಧ ಹಾಗೂ ಬಲಿಷ್ಠ ರಾಷ್ಟ್ರವಾಗಲಿದೆ- ದ್ರೌಪದಿ ಮುರ್ಮು

Date:

ಬೆಂಗಳೂರು ಏರೋಸ್ಪೇಸ್ ವಿಭಾಗ ಆಯೋಜಿಸಿದ್ದ ಏಕೀಕೃತ ಕ್ರಯೋಜನಿಕ್ ಇಂಜಿನ್ ಉತ್ಪಾದನಾ ಸೌಲಭ್ಯ (ಐಸಿಎಂಎಫ್) ಉದ್ಘಾಟಿಸಿ ಮಾತನಾಡಿದರು. ಮುಂದಿನ 25 ವರ್ಷಗಳಲ್ಲಿ ಭಾರತ ಅಮೃತ ಕಾಲವನ್ನು ಪ್ರವೇಶಿಸುವುದರಿಂದ ಭವಿಷ್ಯದಲ್ಲಿ ಎಚ್​ಎಎಲ್ ಮತ್ತು ಇಸ್ರೋ ಸಂಸ್ಥೆಗಳು ಮಹತ್ವದ ಮತ್ತು ಸಕಾರಾತ್ಮಕ ಪಾತ್ರ ನಿರ್ವಹಿಸುತ್ತವೆ ಎಂದು ತಿಳಿಸಿದರು.

ಎಚ್​ಎಎಲ್ ಮತ್ತು ಇಸ್ರೋ ಜಂಟಿಯಾಗಿ ಇಡೀ ದೇಶಕ್ಕೆ ಅತ್ಯಾಧುನಿಕ ಸೌಲಭ್ಯ ಹೊಂದಲು ಕ್ರಯೋಜೆನಿಕ್ ಮತ್ತು ಸೆಮಿ-ಕ್ರಯೋಜೆನಿಕ್ ಎಂಜಿನ್​ಗಳನ್ನು ತಯಾರಿಸುತ್ತಿವೆ. ಭಾರತವು ಈ ಸಾಮರ್ಥ್ಯ ಹೊಂದಿರುವ ವಿಶ್ವದ 6ನೇ ದೇಶವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಐಸಿಎಂಎಫ್ ಉದ್ಘಾಟನೆ ಎಚ್​ಎಎಲ್ ಮತ್ತು ಇಸ್ರೋಗೆ ಮಾತ್ರವಲ್ಲ ಇಡೀ ದೇಶಕ್ಕೆ ಐತಿಹಾಸಿಕ ಕ್ಷಣ. ರಕ್ಷಣಾ ಕ್ಷೇತ್ರದಲ್ಲಿ ಭಾರತ ಆರ್ತನಿರ್ಭರವಾಗಲು ಎಚ್​ಎಎಲ್ ಅಪಾರ ಕೊಡುಗೆ ನೀಡಿದೆ. ಸಂಶೋಧನೆ, ಅಭಿವೃದ್ಧಿ ಮತ್ತು ವಿವಿಧ ಏರ್​ಕ್ರಾಫ್ಟ್ ಪ್ಲಾಟ್​ಫಾಮರ್್​ಗಳ ತಯಾರಿಕೆಯಲ್ಲಿ ತನ್ನ ಸಾಮರ್ಥ್ಯವನ್ನು ಮತ್ತೆ ಮತ್ತೆ ಪ್ರದರ್ಶಿಸಿದೆ ಎಂದು ಶ್ಲಾಘಿಸಿದರು. ಕಾರ್ಯತಂತ್ರದ ರಕ್ಷಣೆ ಮತ್ತು ಅಭಿವೃದ್ಧಿಗೆ ಎಚ್​ಎಎಲ್ ಮತ್ತು ಇಸ್ರೋ ಜತೆಯಾಗಿ ಕೊಡುಗೆ ನೀಡುತ್ತಿವೆ. ರಕ್ಷಣಾ ಸಂಬಂಧಿತ ಉಪಕರಣಗಳನ್ನು ತಯಾರಿಸುವ ಶ್ರೇಷ್ಠ ದರ್ಜೆಯ ಸೌಲಭ್ಯ ಹೊಂದಿರುವ ಎಚ್​ಎಎಲ್ ದೇಶಕ್ಕೆ ಅಮೂಲ್ಯ ಆಸ್ತಿ ಎಂದರು. ಇದೇ ಸಂದರ್ಭದಲ್ಲಿ ರಾಷ್ಟ್ರಪತಿಗಳು ದಕ್ಷಿಣ ವಲಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಯ ಶಂಕುಸ್ಥಾಪನೆ ನೆರವೇರಿಸಿದರು.

ರಾಜ್ಯಪಾಲ ಗೆಹಲೋತ್, ಕೇಂದ್ರ ಸಚಿವೆ ಭಾರತಿ ಪ್ರವೀಣ್ ಪವಾರ್, ಎಚ್​ಎಎಲ್ ಅಧ್ಯಕ್ಷ ಸಿ.ಬಿ.ಅನಂತಕೃಷ್ಣನ್, ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ಸಚಿವ ಡಾ.ಕೆ.ಸುಧಾಕರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...