Monday, March 23, 2026
Monday, March 23, 2026

ಪಿಎಫ್ಐ ನಿಷೇಧವನ್ನ ಇಡೀ ದೇಶವೇ ಸ್ವಾಗತಿಸುತ್ತದೆ-ಅಶ್ವತ್ಥನಾರಾಯಣ

Date:

ಸಮಾಜ ಮತ್ತು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಪಿಎಫ್‌ಐ ಮತ್ತು ಅದರ 8 ಅಂಗಸಂಸ್ಥೆಗಳನ್ನು 5 ವರ್ಷಗಳ ಮಟ್ಟಿಗೆ ನಿಷೇಧಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಇಡೀ ದೇಶವೇ ಸ್ವಾಗತಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಘಟನೆಯು ಬೇರೆ ಯಾವುದೇ ರೂಪದಲ್ಲಿ ತಲೆ ಎತ್ತದಂತೆ ತೀವ್ರ ನಿಗಾ ವಹಿಸಲಾಗುವುದು ಎಂದರು.

ಪಿಎಫ್‌ಐ ಸಂಘಟನೆಯು ವಿದೇಶಿ ಜಾಲಗಳ ಮೂಲಕ ಅಕ್ರಮ ನೆರವು ಪಡೆದುಕೊಳ್ಳುತ್ತಿತ್ತು. ಈ ಮೂಲಕ ದೇಶದಲ್ಲಿ ಧಾರ್ಮಿಕ ಸಂಘರ್ಷ ಉಂಟುಮಾಡಲು ಅದು ಸಂಚು ರೂಪಿಸುತ್ತಿತ್ತು ಎಂದು ಅವರು ವಿವರಿಸಿದ್ದಾರೆ.

ಕೇಂದ್ರ ಸರ್ಕಾರವು ಪಿಎಫ್ ಐ ಸಂಘಟನೆಯ ವಿಧ್ವಂಸಕ ಚಟುವಟಿಕೆಗಳು ಹಾಗೂ ಅನುಮಾನಾಸ್ಪದ ಹಣಕಾಸು ವ್ಯವಹಾರಗಳ ಮೇಲೆ ಹದ್ದಿನ ಕಣ್ಣಿಟ್ಟಿತ್ತು. ಇದರ ಬೆನ್ನಲ್ಲೇ ಎರಡು ದಿವಸಗಳ ಹಿಂದೆ ದೇಶಾದ್ಯಂತ ಆ ಸಂಘಟನೆಯ ಕಚೇರಿಗಳು ಮತ್ತು ನಾಯಕರ ಮೇಲೆ ಎನ್‌ಐಎ ದಾಳಿ ನಡೆಸಲಾಗಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸಮಾಜ ಮತ್ತು ದೇಶದ ಹಿತಕ್ಕೆ ವಿರುದ್ಧವಾಗಿ ವರ್ತಿಸುವ ಯಾವ ಸಂಘಟನೆಗಳನ್ನು ಕೂಡ ಬಿಡುವುದಿಲ್ಲ. ಕೇಂದ್ರ ಸರ್ಕಾರದ ದಾಳಿಯ ಬೆನ್ನಲ್ಲೇ ರಾಜ್ಯ ಪೊಲೀಸರು ಕೂಡ ಮಂಗಳವಾರ 15ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದರು ಎಂದು ಅವರು ಸ್ಪಷ್ಟಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...