Monday, February 2, 2026
Monday, February 2, 2026

ಶಿವಮೊಗ್ಗ RTO ಅವರಿಂದ ಮಹತ್ವದ ಸೂಚನೆ

Date:

ಶಿವಮೊಗ್ಗ ಜಿಲ್ಲೆಯ ವಾಹನ ಮಾಲೀಕರು, ಚಾಲಕರು, ಬಾಡಿಗೆ ವಾಹನ ಚಾಲಕರು, ಸರಕು ಸಾಗಣೆ ವಾಹನದ ಮಾಲೀಕರು, ವಿಐಪಿ, ಸರ್ಕಾರಿ ಆಂಬುಲೆನ್ಸ್ ವಾಹನ ಚಾಲಕರು ಸೇರಿದಂತೆ ಎಲ್ಲ ರೀತಿಯ ವಾಹನ ಚಾಲಕರು ತಮ್ಮ ವಾಹನಗಳ ದಾಖಲಾತಿಗಳನ್ನು ಕಡ್ಡಾಯವಾಗಿ ಹೊಂದಿರಬೇಕು.

ದಾಖಲಾತಿಗಳಾದ ಆರ್‍ಸಿ, ಎಫ್‍ಸಿ, ವಿಮೆ, ಟ್ಯಾಕ್ಸ್ ಕಾರ್ಡ್, ವಾಯು ಮಾಲಿನ್ಯ ತಪಾಸಣಾ ಪತ್ರ, ಪರವಾನಿಗೆ ಹಾಗೂ ತತ್ಸಮಾನದ ವಾಹನ ಚಾಲನಾ ಅನುಜ್ಞಾ ಪತ್ರವನ್ನು ಕಡ್ಡಾಯವಾಗಿ ಪರಿಶೀಲಿಸಿಕೊಂಡು ನಂತರ ವಾಹನದಲ್ಲಿ ಪ್ರಯಾಣಿಸಬೇಕು.

ವಾಹನದಲ್ಲಿ ಯಾವುದೊಂದು ದಾಖಲೆ ಅಸಿಂಧುವಾಗಿದ್ದರೆ ಅಥವಾ ಚಾಲನೆಯಲ್ಲಿ ಇಲ್ಲದಿದ್ದರೆ ನಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ಎಲ್ಲ ರೀತಿಯ ದಾಖಲಾತಿಗಳನ್ನು ಹೊಂದಿದ ವಾಹನಗಳಲ್ಲಿ ಮಾತ್ರ ಪ್ರಯಾಣಿಸಬೇಕು.

ಬಸ್ ನಿಲ್ದಾಣಗಳಲ್ಲಿ ಕೋರಿಕೆಯ ನಿಲುಗಡೆ ಹಾಗೂ ವಾಹನ ನಿಲ್ದಾಣದ ಸ್ಥಳಗಳಲ್ಲಿ ಕಡ್ಡಾಯವಾಗಿ ನಿಲ್ಲಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಬಸ್ ಚಾಲಕರು ಮತ್ತು ನಿರ್ವಾಹಕರಿಗೆ ತಿಳಿಸಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಗಂಗಾಧರ್ ತಿಳಿಸಿದ್ದಾರೆ.

ಈ ಸಂಬಂಧ ದೂರುಗಳೇನಾದರೂ ಬಂದಲ್ಲಿ ವಾಹನ ಮಾಲೀಕರ ಮೇಲೂ, ಪರವಾನಗಿದಾರರ ಮೇಲೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.

ಸಾರ್ವಜನಿಕ ವಾಹನವಾಗಿದ್ದಲ್ಲಿ ಪ್ರಯಾಣಿಕರು, ಸರಕು ಸಾಗಣೆ ವಾಹನವಾಗಿದ್ದಲ್ಲಿ ಸರಕನ್ನು ಮಾತ್ರ, ಬಾಡಿಗೆ ವಾಹನವಾಗಿದ್ದಲ್ಲಿ ಪ್ರಯಾಣಿಕರು ಹೀಗೆ ವಾಹನಗಳ ಉದ್ದೇಶಗಳಿಗೆ ತಕ್ಕಂತೆ ಕ್ಷೇಮದ ಪ್ರಯಾಣವನ್ನು ಕೈಗೊಳ್ಳಬೇಕು ಹಾಗೂ ಎಲ್ಲರೂ ವಾಹನ ನಿಯಮಗಳನ್ನು ಪಾಲನೆ ಮಾಡಬೇಕು. ಅಪಘಾತರಹಿತ ಚಾಲನಾ ನಿಯಮ ಪಾಲಿಸುವ ಚಾಲಕರೇ ರಾಜ್ಯದ ಹೆಮ್ಮೆಯ ಚಾಲಕರು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...