Thursday, May 14, 2026
Thursday, May 14, 2026

ಶಿವಮೊಗ್ಗ RTO ಅವರಿಂದ ಮಹತ್ವದ ಸೂಚನೆ

Date:

ಶಿವಮೊಗ್ಗ ಜಿಲ್ಲೆಯ ವಾಹನ ಮಾಲೀಕರು, ಚಾಲಕರು, ಬಾಡಿಗೆ ವಾಹನ ಚಾಲಕರು, ಸರಕು ಸಾಗಣೆ ವಾಹನದ ಮಾಲೀಕರು, ವಿಐಪಿ, ಸರ್ಕಾರಿ ಆಂಬುಲೆನ್ಸ್ ವಾಹನ ಚಾಲಕರು ಸೇರಿದಂತೆ ಎಲ್ಲ ರೀತಿಯ ವಾಹನ ಚಾಲಕರು ತಮ್ಮ ವಾಹನಗಳ ದಾಖಲಾತಿಗಳನ್ನು ಕಡ್ಡಾಯವಾಗಿ ಹೊಂದಿರಬೇಕು.

ದಾಖಲಾತಿಗಳಾದ ಆರ್‍ಸಿ, ಎಫ್‍ಸಿ, ವಿಮೆ, ಟ್ಯಾಕ್ಸ್ ಕಾರ್ಡ್, ವಾಯು ಮಾಲಿನ್ಯ ತಪಾಸಣಾ ಪತ್ರ, ಪರವಾನಿಗೆ ಹಾಗೂ ತತ್ಸಮಾನದ ವಾಹನ ಚಾಲನಾ ಅನುಜ್ಞಾ ಪತ್ರವನ್ನು ಕಡ್ಡಾಯವಾಗಿ ಪರಿಶೀಲಿಸಿಕೊಂಡು ನಂತರ ವಾಹನದಲ್ಲಿ ಪ್ರಯಾಣಿಸಬೇಕು.

ವಾಹನದಲ್ಲಿ ಯಾವುದೊಂದು ದಾಖಲೆ ಅಸಿಂಧುವಾಗಿದ್ದರೆ ಅಥವಾ ಚಾಲನೆಯಲ್ಲಿ ಇಲ್ಲದಿದ್ದರೆ ನಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ಎಲ್ಲ ರೀತಿಯ ದಾಖಲಾತಿಗಳನ್ನು ಹೊಂದಿದ ವಾಹನಗಳಲ್ಲಿ ಮಾತ್ರ ಪ್ರಯಾಣಿಸಬೇಕು.

ಬಸ್ ನಿಲ್ದಾಣಗಳಲ್ಲಿ ಕೋರಿಕೆಯ ನಿಲುಗಡೆ ಹಾಗೂ ವಾಹನ ನಿಲ್ದಾಣದ ಸ್ಥಳಗಳಲ್ಲಿ ಕಡ್ಡಾಯವಾಗಿ ನಿಲ್ಲಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಬಸ್ ಚಾಲಕರು ಮತ್ತು ನಿರ್ವಾಹಕರಿಗೆ ತಿಳಿಸಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಗಂಗಾಧರ್ ತಿಳಿಸಿದ್ದಾರೆ.

ಈ ಸಂಬಂಧ ದೂರುಗಳೇನಾದರೂ ಬಂದಲ್ಲಿ ವಾಹನ ಮಾಲೀಕರ ಮೇಲೂ, ಪರವಾನಗಿದಾರರ ಮೇಲೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.

ಸಾರ್ವಜನಿಕ ವಾಹನವಾಗಿದ್ದಲ್ಲಿ ಪ್ರಯಾಣಿಕರು, ಸರಕು ಸಾಗಣೆ ವಾಹನವಾಗಿದ್ದಲ್ಲಿ ಸರಕನ್ನು ಮಾತ್ರ, ಬಾಡಿಗೆ ವಾಹನವಾಗಿದ್ದಲ್ಲಿ ಪ್ರಯಾಣಿಕರು ಹೀಗೆ ವಾಹನಗಳ ಉದ್ದೇಶಗಳಿಗೆ ತಕ್ಕಂತೆ ಕ್ಷೇಮದ ಪ್ರಯಾಣವನ್ನು ಕೈಗೊಳ್ಳಬೇಕು ಹಾಗೂ ಎಲ್ಲರೂ ವಾಹನ ನಿಯಮಗಳನ್ನು ಪಾಲನೆ ಮಾಡಬೇಕು. ಅಪಘಾತರಹಿತ ಚಾಲನಾ ನಿಯಮ ಪಾಲಿಸುವ ಚಾಲಕರೇ ರಾಜ್ಯದ ಹೆಮ್ಮೆಯ ಚಾಲಕರು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಕುವೆಂಪು ವಿವಿಯಲ್ಲಿ ನಾಳೆಯಿಂದ ‘ಮಾನವ-ವನ್ಯಜೀವಿ ಸಂಘರ್ಷ’ ಕುರಿತು ರಾಷ್ಟ್ರೀಯ ಸಮ್ಮೇಳನ

Kuvempu University ಕುವೆಂಪು ವಿಶ್ವವಿದ್ಯಾಲಯದ ವನ್ಯಜೀವಿ ಮತ್ತು ನಿರ್ವಹಣಾ ಸ್ನಾತಕೋತ್ತರ ಅಧ್ಯಯನ...

Karnataka Sanga ಕರ್ನಾಟಕ ಸಂಘದಲ್ಲಿ ಇಬ್ಬರು ಹಿರಿಯ ಮಹನೀಯರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

Karnataka Sanga ಶಿವಮೊಗ್ಗ ಕರ್ನಾಟಕ ಸಂಘದಲ್ಲಿ ದಿನಾಂಕ 15 ಮೇ 2026ರ...

ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 𝗠𝗲𝘁𝗿𝗼 𝗖𝗼𝗮𝗰𝗵 ಗಳ ಖರೀದಿಗೆ 𝗜𝗖𝗙 ಜೊತೆ ಒಪ್ಪಂದ, ₹𝟭,𝟱𝟭𝟯.𝟳𝟱 ಕೋಟಿ ಮೊತ್ತದ ಕಾರ್ಯಾದೇಶ

ಬೆಂಗಳೂರು ನಗರದ ಸಂಚಾರ ದಟ್ಟಣೆಗೆ ಮುಕ್ತಿ ನೀಡಲಿರುವ ಬಹುನಿರೀಕ್ಷಿತ ಬೆಂಗಳೂರು ಉಪನಗರ...