Monday, December 15, 2025
Monday, December 15, 2025

ನಿಯಮಿತ ವ್ಯಾಯಾಮದಿಂದ ಆರೋಗ್ಯವಂತ ಹೃದಯ-ಗಣಪತಿ ಭಟ್

Date:

ಉಡುಪಿಯ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯಕ್ಕಾಗಿ ವಿಶ್ವ ಹೃದಯ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾನಾಡಿದ ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ಇಂದು ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿವೆ. ಆರೋಗ್ಯವಂತ ಹೃದಯವಿರಬೇಕಾದರೆ ನಿಯಮಿತವಾದ ವ್ಯಾಯಾಮ, ಸರಿಯಾದ ಆಹಾರ ಕ್ರಮವನ್ನು ಪಾಲಿಸಬೇಕು. ಜಗತ್ತಿನ ಎಲ್ಲರೂ ವಿಶ್ವ ಹೃದಯ ದಿನವನ್ನು ಹೃದ್ರೋಗಿಗಳೇ ಇಲ್ಲವಾಗಿಸುವ ಮೂಲಕ ಆಚರಿಸುವಂತೆ ಆಗಲಿ ಎಂದು ಆಶಿಸಿದರು. ಕಾರ್ಯಕ್ರಮದಲ್ಲಿ ಕ್ರಿಯೇಟಿವ್‌ ಸೈನ್ಸ್‌ ಕ್ಲಬ್‌ನ ಮುಖ್ಯಸ್ಥ ಲೋಹಿತ್‌ ಎಸ್‌ ಕೆ ಸುಂದರ ಮತ್ತು ಸ್ವಸ್ಥಮನಸ್ಸುಗಳ ಮೂಲಕ ಎಲ್ಲರೂ ಹೃದಯವಂತರಾಗಿ, ಆರೋಗ್ಯವಂತರಾಗಲಿ ಎಂದು ಹಾರೈಸಿದರು. ನಂತರ ವಿದ್ಯಾರ್ಥಿಗಳಿಂದ ಹೃದಯ ಸಂಬಂಧಿ ಘೋಷಣೆಗಳು ನೆರವೇರಿತು.
ಈ ಸಂದರ್ಭದಲ್ಲಿ ಕ್ರಿಯೇಟಿವ್‌ ಕಾಲೇಜಿನ ಸಹ ಸಂಸ್ಥಾಪಕರಾದ ಶ್ರೀ ಗಣಪತಿ ಭಟ್‌ ಕೆ ಎಸ್‌, ಆದರ್ಶ ಎಂ ಕೆ ಅಮೃತ್‌ ರೈ ಉಪನ್ಯಾಸಕರಾದ ಉಮೇಶ್‌, ರಾಘವೇಂದ್ರ ರಾವ್‌, ರಾಜೇಶ್‌ ಶೆಟ್ಟಿ, ಡಾ. ಆದಂ ಶೇಕ್, ಅಕ್ಷತಾ ಜೈನ್‌, ಸುನಿಲ್‌, ಹರೀಶ್‌ ಉಪಸ್ಥಿತರಿದ್ದರು. ಉಪನ್ಯಾಸಕರಾದ ರಾಮಕೃಷ್ಣ ಹೆಗಡೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...