Sunday, August 23, 2026
Sunday, August 23, 2026

ನಿಯಮಿತ ವ್ಯಾಯಾಮದಿಂದ ಆರೋಗ್ಯವಂತ ಹೃದಯ-ಗಣಪತಿ ಭಟ್

Date:

ಉಡುಪಿಯ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯಕ್ಕಾಗಿ ವಿಶ್ವ ಹೃದಯ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾನಾಡಿದ ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ಇಂದು ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿವೆ. ಆರೋಗ್ಯವಂತ ಹೃದಯವಿರಬೇಕಾದರೆ ನಿಯಮಿತವಾದ ವ್ಯಾಯಾಮ, ಸರಿಯಾದ ಆಹಾರ ಕ್ರಮವನ್ನು ಪಾಲಿಸಬೇಕು. ಜಗತ್ತಿನ ಎಲ್ಲರೂ ವಿಶ್ವ ಹೃದಯ ದಿನವನ್ನು ಹೃದ್ರೋಗಿಗಳೇ ಇಲ್ಲವಾಗಿಸುವ ಮೂಲಕ ಆಚರಿಸುವಂತೆ ಆಗಲಿ ಎಂದು ಆಶಿಸಿದರು. ಕಾರ್ಯಕ್ರಮದಲ್ಲಿ ಕ್ರಿಯೇಟಿವ್‌ ಸೈನ್ಸ್‌ ಕ್ಲಬ್‌ನ ಮುಖ್ಯಸ್ಥ ಲೋಹಿತ್‌ ಎಸ್‌ ಕೆ ಸುಂದರ ಮತ್ತು ಸ್ವಸ್ಥಮನಸ್ಸುಗಳ ಮೂಲಕ ಎಲ್ಲರೂ ಹೃದಯವಂತರಾಗಿ, ಆರೋಗ್ಯವಂತರಾಗಲಿ ಎಂದು ಹಾರೈಸಿದರು. ನಂತರ ವಿದ್ಯಾರ್ಥಿಗಳಿಂದ ಹೃದಯ ಸಂಬಂಧಿ ಘೋಷಣೆಗಳು ನೆರವೇರಿತು.
ಈ ಸಂದರ್ಭದಲ್ಲಿ ಕ್ರಿಯೇಟಿವ್‌ ಕಾಲೇಜಿನ ಸಹ ಸಂಸ್ಥಾಪಕರಾದ ಶ್ರೀ ಗಣಪತಿ ಭಟ್‌ ಕೆ ಎಸ್‌, ಆದರ್ಶ ಎಂ ಕೆ ಅಮೃತ್‌ ರೈ ಉಪನ್ಯಾಸಕರಾದ ಉಮೇಶ್‌, ರಾಘವೇಂದ್ರ ರಾವ್‌, ರಾಜೇಶ್‌ ಶೆಟ್ಟಿ, ಡಾ. ಆದಂ ಶೇಕ್, ಅಕ್ಷತಾ ಜೈನ್‌, ಸುನಿಲ್‌, ಹರೀಶ್‌ ಉಪಸ್ಥಿತರಿದ್ದರು. ಉಪನ್ಯಾಸಕರಾದ ರಾಮಕೃಷ್ಣ ಹೆಗಡೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...