Monday, March 23, 2026
Monday, March 23, 2026

ವಿದ್ಯುತ್ ದರ ಏರಿಕೆ ಕ್ರಮವನ್ನ ಸರ್ಕಾರ ಹಿಂಪಡೆಯುವ ಪ್ರಸ್ತಾಪ

Date:

ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಕಾರಣ ರಾಜ್ಯ ಸರ್ಕಾರ ಮೂರು ದಿನಗಳ ಹಿಂದೆಯಷ್ಟೇ ಪರಿಷ್ಕರಣೆ ಮಾಡಿದ್ದ ವಿದ್ಯುತ್ ದರವನ್ನು ಹಿಂಪಡೆಯಲು ತೀರ್ಮಾನಿಸಿದೆ.

ಅಗತ್ಯವಸ್ತುಗಳ ಬೆಲೆ ಗಗನಕ್ಕೇರಿದ್ದು, ವಿದ್ಯುತ್ ದರ ಪರಿಷ್ಕರಣೆಯಿಂದಾಗಿ ಸಾರ್ವಜನಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಹೀಗಾಗಿ ಸರ್ಕಾರ ಪರಿಷ್ಕೃತ ದರವನ್ನು ವಾಪಸ್ ಪಡೆಯಲು ನಿರ್ಧರಿಸಿದೆ.

ದಸರಾ ಹಬ್ಬದ ನಂತರ ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಇಂಧನ ಸಚಿವ ಸುನೀಲ್‍ ಕುಮಾರ್ ಅವರು ಚರ್ಚಿಸಿ ಪರಿಷ್ಕೃತ ದರವನ್ನು ಕೈಬಿಡಲಿದ್ದಾರೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ.

ಈ ಬಗ್ಗೆ ಈಗಾಗಲೇ ಸುಳಿವು ಕೊಟ್ಟಿರುವ ಅವರು, ವಿದ್ಯುತ್ ದರವನ್ನು ಪರಿಷ್ಕರಣೆ ಮಾಡಿರುವುದರಿಂದ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಹೇಳಿದ್ದಾರೆ.

ಒಂದು ಕಡೆ ಅಗತ್ಯವಸ್ತುಗಳ ಬೆಲೆ ಏರಿಕೆ, ಮತ್ತೊಂದು ಕಡೆ ವಿದ್ಯುತ್ ದರ ಏರಿಕೆಯಿಂದಾಗಿ ಸಾರ್ವಜನಿಕರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ, ಹಿಂಪಡೆಯದಿದ್ದರೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದರು.
ಇದಕ್ಕೆ ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಕೂಡ ದನಿಗೂಡಿಸಿದ್ದವು. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ವಿಪಕ್ಷಗಳು ಇದನ್ನು ಅಸ್ತ್ರವಾಗಿಸಿಕೊಂಡರೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂಬ ಆತಂಕ ಸರ್ಕಾರಕ್ಕಿದೆ.
ಹೀಗಾಗಿ ಪರಿಷ್ಕೃತ ದರವನ್ನು ಹಿಂಪಡೆಯುವ ಸಾಧ್ಯತೆ ಇದೆ ಎಂದು ಇಲಾಖೆಯ ಉನ್ನತ ಮೂಲಗಳು ಖಚಿತಪಡಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...