Thursday, August 13, 2026
Thursday, August 13, 2026

ವಿದ್ಯುತ್ ದರ ಏರಿಕೆ ಕ್ರಮವನ್ನ ಸರ್ಕಾರ ಹಿಂಪಡೆಯುವ ಪ್ರಸ್ತಾಪ

Date:

ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಕಾರಣ ರಾಜ್ಯ ಸರ್ಕಾರ ಮೂರು ದಿನಗಳ ಹಿಂದೆಯಷ್ಟೇ ಪರಿಷ್ಕರಣೆ ಮಾಡಿದ್ದ ವಿದ್ಯುತ್ ದರವನ್ನು ಹಿಂಪಡೆಯಲು ತೀರ್ಮಾನಿಸಿದೆ.

ಅಗತ್ಯವಸ್ತುಗಳ ಬೆಲೆ ಗಗನಕ್ಕೇರಿದ್ದು, ವಿದ್ಯುತ್ ದರ ಪರಿಷ್ಕರಣೆಯಿಂದಾಗಿ ಸಾರ್ವಜನಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಹೀಗಾಗಿ ಸರ್ಕಾರ ಪರಿಷ್ಕೃತ ದರವನ್ನು ವಾಪಸ್ ಪಡೆಯಲು ನಿರ್ಧರಿಸಿದೆ.

ದಸರಾ ಹಬ್ಬದ ನಂತರ ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಇಂಧನ ಸಚಿವ ಸುನೀಲ್‍ ಕುಮಾರ್ ಅವರು ಚರ್ಚಿಸಿ ಪರಿಷ್ಕೃತ ದರವನ್ನು ಕೈಬಿಡಲಿದ್ದಾರೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ.

ಈ ಬಗ್ಗೆ ಈಗಾಗಲೇ ಸುಳಿವು ಕೊಟ್ಟಿರುವ ಅವರು, ವಿದ್ಯುತ್ ದರವನ್ನು ಪರಿಷ್ಕರಣೆ ಮಾಡಿರುವುದರಿಂದ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಹೇಳಿದ್ದಾರೆ.

ಒಂದು ಕಡೆ ಅಗತ್ಯವಸ್ತುಗಳ ಬೆಲೆ ಏರಿಕೆ, ಮತ್ತೊಂದು ಕಡೆ ವಿದ್ಯುತ್ ದರ ಏರಿಕೆಯಿಂದಾಗಿ ಸಾರ್ವಜನಿಕರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ, ಹಿಂಪಡೆಯದಿದ್ದರೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದರು.
ಇದಕ್ಕೆ ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಕೂಡ ದನಿಗೂಡಿಸಿದ್ದವು. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ವಿಪಕ್ಷಗಳು ಇದನ್ನು ಅಸ್ತ್ರವಾಗಿಸಿಕೊಂಡರೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂಬ ಆತಂಕ ಸರ್ಕಾರಕ್ಕಿದೆ.
ಹೀಗಾಗಿ ಪರಿಷ್ಕೃತ ದರವನ್ನು ಹಿಂಪಡೆಯುವ ಸಾಧ್ಯತೆ ಇದೆ ಎಂದು ಇಲಾಖೆಯ ಉನ್ನತ ಮೂಲಗಳು ಖಚಿತಪಡಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...