Wednesday, February 4, 2026
Wednesday, February 4, 2026

ಅಡಕೆ ಎಲೆಚುಕ್ಕೆರೋಗ ಔಷಧ ಸಿಂಪರಣೆಗೆ ರಾಜ್ಯದ ಆರ್ಥಿಕ ನೆರವು-ಆರಗ ಜ್ಞಾನೇಂದ್ರ

Date:

ರಾಜ್ಯ ಸರ್ಕಾರವು ಅಡಿಕೆ ಬೆಳಗಾರರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಅಡಿಕೆಗೆ ಎಲೆಚುಕ್ಕೆ ರೋಗ ಹಿನ್ನೆಲೆಯಲ್ಲಿ ಅಡಿಕೆ ಬೆಳೆಗಾರರಿಗೆ ತಲಾ 1 ಹೆಕ್ಟೇರ್ ಗೆ ಔಷಧ ಸಿಂಪಡಣೆಗೆ ರಾಜ್ಯ ಸರ್ಕಾರ 4 ಸಾವಿರ ರೂ. ಆರ್ಥಿಕ ನೆರವು ನೀಡಲಿದೆ.

ಈ ಕುರಿತು ಮಾಹಿತಿ ನೀಡಿರುವ ಗೃಹ ಸಚಿವ ಅರಗಜ್ಞಾನೇಂದ್ರ, ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸರ್ಕಾರ 8 ಕೋಟಿ ರೂ. ಅನುದಾನ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಉತ್ತರಕನ್ನಡ,ದಕ್ಷಿಣ ಕನ್ನಡ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಅಡಿಕೆ ಬೆಳೆ ಪ್ರದೇಶದಲ್ಲಿ ಎಲೆ ಚುಕ್ಕಿ ರೋಗ ಹಬ್ಬಿದ್ದು, ಸರ್ಕಾರ ನಿಯಂತ್ರಣಕ್ಕೆ ಮೊದಲ ಹಂತದಲ್ಲಿ 8 ಕೋಟಿ ರೂ. ಅನುದಾನ ನೀಡಿದೆ.

ಈ ಪೈಕಿ 4 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.ಅಡಿಕೆಗೆ ಎಲೆಚುಕ್ಕೆ ರೋಗಕ್ಕೆ ಔಷಧಿ ಸಿಂಪಡಣೆಗೆ ಪ್ರತಿ ಹೆಕ್ಟೇರ್ ಗೆ 4 ಸಾವಿರ ರೂ. ಹಾಗೂ ಮೊದಲ ಸಿಂಪಡಣೆಗೆ 1.5 ಹೆಕ್ಟೇರ್ ಅಡಿಕೆ ತೋಟ ಹೊಂದಿರುವ ರೈತರಿಗೆ ಆರ್ಥಿಕ ನೆರವು ಸಿಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...