Tuesday, March 24, 2026
Tuesday, March 24, 2026

ಜೈಶಂಕರ್ ಹೇಳಿಕೆಯಿಂದ ಬೆಚ್ಚಿಬಿದ್ದ ಪಾಕ್

Date:

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತೊಮ್ಮೆ ಹೆಚ್ಚಿದೆ. ಅಂತರಾಷ್ಟ್ರೀಯ ಭಯೋತ್ಪಾದನೆಯಲ್ಲಿ ಪಾಕಿಸ್ತಾನ ಪರಿಣಿತವಾಗಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಗುಜರಾತ್‌ನಲ್ಲಿ ಹೇಳಿದ್ದರು.

ಇದನ್ನು ಬಿಟ್ಟರೆ ಭಯೋತ್ಪಾದನೆಯನ್ನ ಬಹಿರಂಗವಾಗಿ ಬೆಂಬಲಿಸಿದ ರಾಷ್ಟ್ರ ಮತ್ತೊಂದಿಲ್ಲ. ಇದೀಗ ಜೈಶಂಕರ್ ಹೇಳಿಕೆಯಿಂದ ಪಾಕಿಸ್ತಾನ ಬೆಚ್ಚಿ ಬಿದ್ದಿದೆ. ಎಂದಿನಂತೆ ಮತ್ತೆ ಸಿಟ್ಟಿನಿಂದ ಭಾರತದ ಬಗ್ಗೆ ಸುಳ್ಳು ಹೇಳಿಕೆ ನೀಡಿ, ಜಗತ್ತನ್ನೇ ದಾರಿ ತಪ್ಪಿಸುವ ಕೆಲಸ ಮಾಡಿದ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಿದೆ.

ಪ್ರತಿ ಬಾರಿಯೂ ಭಾರತದ ನಾಯಕರು ಭಯೋತ್ಪಾದನೆ ಕುರಿತು ಪಾಕಿಸ್ತಾನದ ವಿರುದ್ಧ ಜಗತ್ತನ್ನ ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ ಎಂದು ಹೇಳಲು ಜೈಶಂಕರ್ ಅವರ ಹೇಳಿಕೆ ಸಾಕು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಇಂತಹ ಹೇಳಿಕೆಗಳು ಸಂಪೂರ್ಣ ಬೇಜವಾಬ್ದಾರಿಯಾಗಿದ್ದು, ನಾವು ಅದನ್ನ ಖಂಡಿಸುತ್ತೇವೆ. ಭಾರತವು ತನ್ನ ನೆಲದಿಂದ ಭಯೋತ್ಪಾದನೆಯನ್ನ ಬೆಂಬಲಿಸುತ್ತದೆ ಮತ್ತು ಅವರ ವಿರುದ್ಧ ಪಿತೂರಿ ನಡೆಸುತ್ತದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ.

ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದರು. ಒಂದು ಕಡೆ ಭಾರತವನ್ನು ಐಟಿ ಪರಿಣಿತ ಎಂದು ಜಗತ್ತು ಪರಿಗಣಿಸಿದರೆ, ಮತ್ತೊಂದೆಡೆ ಪಾಕಿಸ್ತಾನ ಅಂತಾರಾಷ್ಟ್ರೀಯ ಭಯೋತ್ಪಾದನೆಯಲ್ಲಿ ಪರಿಣಿತವಾಗಿದೆ ಎಂದು ಅವರು ಹೇಳಿದ್ದರು. ಪಾಕಿಸ್ತಾನದ ರೀತಿಯಲ್ಲಿ ಭಯೋತ್ಪಾದನೆಯನ್ನು ಬೇರೆ ಯಾವ ದೇಶವೂ ಬೆಂಬಲಿಸುವುದಿಲ್ಲ ಎಂದು ಜೈಶಂಕರ್ ಕಟುವಾಗಿ ಹೇಳಿದ್ದರು. ಪ್ರತಿ ಬಾರಿಯೂ ಪಾಕಿಸ್ತಾನ ಭಾರತದ ವಿರುದ್ಧ ಹೇಗೆ ಪಿತೂರಿ ನಡೆಸಿದೆ ಎಂಬುದು ಎಲ್ಲರಿಗೂ ಗೊತ್ತು. 26/11 ದಾಳಿಯ ನಂತರ, ಅಂತಹ ನಡವಳಿಕೆಯು ಸ್ವೀಕಾರಾರ್ಹವಲ್ಲ ಎಂದು ನಾವೇ ಅರ್ಥಮಾಡಿಕೊಳ್ಳಬೇಕು. ಯಾರಾದರೂ ಹೀಗೆ ಮಾಡಿದರೆ ಅದರ ಪರಿಣಾಮವನ್ನು ಎದುರಿಸಲು ಸಿದ್ಧರಾಗಿರಬೇಕು.
ಪ್ರತಿಬಾರಿಯೂಪಾಕಿಸ್ತಾನಕ್ಕೆತಕ್ಕಪ್ರತ್ಯುತ್ತರ
ಭಯೋತ್ಪಾದಕ ದಾಳಿಗಳನ್ನ ಯಾವಾಗಲೂ ಪಾಕಿಸ್ತಾನದಿಂದ ಭಾರತದ ವಿರುದ್ಧ ನಡೆಸಲಾಗುತ್ತದೆ ಎಂಬುದು ಇಲ್ಲಿ ತಿಳಿಯಬೇಕಾದ ಸಂಗತಿ.

ಅನೇಕ ಸಂದರ್ಭಗಳಲ್ಲಿ, ಪಾಕಿಸ್ತಾನದ ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದಲ್ಲಿ ಅಮಾಯಕರ ಪ್ರಾಣವನ್ನು ತೆಗೆದುಕೊಂಡಿದ್ದಾರೆ. ಅದು ಉರಿ ದಾಳಿಯಾಗಿರಲಿ ಅಥವಾ ನಂತರ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಾಗಿರಲಿ. ಭಾರತವೂ ಯಾವಾಗಲೂ ನೆರೆಯ ದೇಶಕ್ಕೆ ತಕ್ಕ ಪ್ರತ್ಯುತ್ತರ ನೀಡುತ್ತಲೇ ಬಂದಿದೆ. ಒಂದು ಕಡೆ ಉರಿ ದಾಳಿಯ ನಂತರ ಸರ್ಜಿಕಲ್ ಸ್ಟ್ರೈಕ್ ನಡೆಸಿದರೆ, ಇನ್ನೊಂದು ಕಡೆ ಪುಲ್ವಾಮಾ ದಾಳಿಯ ನಂತರ ವೈಮಾನಿಕ ದಾಳಿ ನಡೆಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

Manasadhara Trust ಸರ್ಕಾರಿ ಶಾಲಾ ಮಕ್ಕಳಿಗಾಗಿ ಮನಃಸ್ಫೂರ್ತಿ ಬೇಸಿಗೆ ಶಿಬಿರ

Manasadhara Trust ಮಾನಸಾಧಾರ ಟ್ರಸ್ಟ್(ರಿ), ಮನಃಸ್ಫೂರ್ತಿ ವಿಶೇಷ ಶಾಲೆ(ರಿ) ಮತ್ತು ಕಲಿಕಾ...