Monday, December 15, 2025
Monday, December 15, 2025

ಕ್ಲೈಮ್ಯಾಕ್ಸ್ ನಿಂದಲೇ ಪ್ರಿಯವಾದ ಕಾಂತಾರ ಜನ ಮೆಚ್ಚುತ್ತಿರುವ ಚಿತ್ರ

Date:

ವಿಶ್ವದಾದ್ಯಂತ ರಿಷಬ್ ಶೆಟ್ಟಿ ‘ಕಾಂತಾರ’ ಕಿಚ್ಚು ಹೊತ್ತಿಕೊಂಡಿದೆ. ಸಿನಿಮಾ ನೋಡಿದವರು ಮತ್ತೆ ಮತ್ತೆ ನೋಡುತ್ತಿದ್ದಾರೆ. ಎಲ್ಲರಿಗೂ ನೋಡುವಂತೆ ಹೇಳುತ್ತಿದ್ದಾರೆ. ಅದರಲ್ಲೂ ಕ್ಲೈಮ್ಯಾಕ್ಸ್ ಬಗ್ಗೆ ಹಾಡಿ ಹೊಗಳುತ್ತಿದ್ದಾರೆ.

ಹೊರ ರಾಜ್ಯಗಳಲ್ಲೂ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ತಿದ್ದು, ಆಂಧ್ರ, ತೆಲಂಗಾಣ, ತಮಿಳುನಾಡಿನಲ್ಲೂ ‘ಕಾಂತಾರ’ ಕ್ರೇಜ್ ಜೋರಾಗಿದೆ.
ಒಂದ್ಕಾಲದಲ್ಲಿ ಪರಭಾಷೆಯ ಸಿನಿಮಾಗಳು ಕರ್ನಾಟಕದಲ್ಲಿ ಸದ್ದು ಮಾಡುತ್ತಿದ್ದವು. ಆದರೆ ಈಗ ಕನ್ನಡ ಸಿನಿಮಾಗಳು ಹೊರ ರಾಜ್ಯಗಳಲ್ಲೂ ಪ್ರೇಕ್ಷಕರನ್ನು ಸೆಳೀತಿವೆ.

KGF ಸೀರಿಸ್ ಸಿನಿಮಾಗಳ ನಂತರ ‘777 ಚಾರ್ಲಿ’, ‘ವಿಕ್ರಾಂತ್ ರೋಣ’, ಈಗ ‘ಕಾಂತಾರ’ ಅದೇ ಹಾದಿಯಲ್ಲಿದೆ. ತಮಿಳು, ತೆಲುಗು ಪ್ರೇಕ್ಷಕರು ರಿಷಬ್ ಶೆಟ್ಟಿ ಅಂಡ್ ಟೀಮ್ ಪ್ರಯತ್ನಕ್ಕೆ ಬಹುಪರಾಕ್ ಹೇಳ್ತಿದ್ದಾರೆ. ಬೇರೆ ಭಾಷೆಗಳಿಗೆ ಡಬ್ ಆಗದೇ ಇದ್ದರೂ ಕನ್ನಡದಲ್ಲೇ ಎಲ್ಲರೂ ಸಿನಿಮಾ ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ.
ಇದೀಗ KGF ಹಾಗೂ ‘ಕಾಂತಾರ’ ಸಿನಿಮಾಗಳನ್ನು ಹೋಲಿಕೆ ಮಾಡಿ ಕೆಲವರು ಮಾತನಾಡುತ್ತಿದ್ದಾರೆ. ಕೆಲವರು ಟ್ರೈಲರ್ ಮಾತ್ರ ನೋಡಿ ‘ಕಾಂತಾರ’ ಸಿನಿಮಾ ನೋಡಲು ಬರ್ತಿದ್ದಾರೆ.
ಕಾಂತಾರ’ ಚಿತ್ರದ ಕಂಟೆಂಟ್ ಹಾಗೂ ಕನ್ನಡ ಕಲ್ಚರ್‌ನ ತೋರಿಸಿರುವ ಪರಿ ಚೆನ್ನಾಗಿದೆ, ರಿಷಬ್ ಶೆಟ್ಟಿ ನಿರ್ದೇಶನ, ನಟನೆ ಸೂಪರ್ ಎಂದು ಕೊಂಡಾಡುತ್ತಿದ್ದಾರೆ.

ಸತತ 5 ದಿನಗಳಿಂದ ‘ಕಾಂತಾರ’ ಸಿನಿಮಾ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಶನಿವಾರಕ್ಕೆ ಹೋಲಿಸಿದರೆ ಸೋಮವಾರ, ಮಂಗಳವಾರ ಕಲೆಕ್ಷನ್ ಹೆಚ್ಚಾಗಿದೆ. ಅಂದಾಜು 16 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾಗಿದ್ದ ಸಿನಿಮಾ ಈಗ 25 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಚಿತ್ರತಂಡ ಮಂಗಳೂರಿಗೆ ಭೇಟಿ ಕೊಟ್ಟು ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದೆ. ಈ ವರ್ಷದ ಮತ್ತೊಂದು ಬ್ಲಾಕ್‌ಬಸ್ಟರ್ ಹಿಟ್ ಆಗಿ ‘ಕಾಂತಾರ’ ಹೊರಹೊಮ್ಮಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...