Monday, December 15, 2025
Monday, December 15, 2025

ತೀರ್ಥಹಳ್ಳಿಯ ಲೇಖಕರ ಕಾದಂಬರಿ ಸಿನಿಮಾ ಆಗುತ್ತಿದೆ

Date:

ಶ್ರೀ ಕೃಷ್ಣ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾಗೆ ರಕ್ಷಿತ್ ತೀರ್ಥಹಳ್ಳಿ ಬರೆದಿರುವ ಕಾಡಿನ ನೆಂಟರು ಎಂಬ ಕಾದಂಬರಿಯಿಂದ ಕಥೆ ಆರಿಸಿಕೊಳ್ಳಲಾಗಿದೆ. ಸಿನಿಮಾಗೆ ತಿಮ್ಮನ ಮೊಟ್ಟೆಗಳು ಎಂದು ಟೈಟಲ್ ಇಡಲಾಗಿದೆ. ಆದರ್ಶ್ ಅಯ್ಯಂಗಾರ್ ಚೊಚ್ಚಲ ನಿರ್ಮಾಣ ಸಿನಿಮಾಗೆ ರಕ್ಷಿತ್ ತೀರ್ಥಹಳ್ಳಿ ನಿರ್ದೇಶನ ಮಾಡಲಿದ್ದಾರೆ. ಶ್ರೀ ಕೃಷ್ಣ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾಗೆ ರಕ್ಷಿತ್ ತೀರ್ಥಹಳ್ಳಿ ಬರೆದಿರುವ ಕಾಡಿನ ನೆಂಟರು ಎಂಬ ಕಾದಂಬರಿಯಿಂದ ಕಥೆ ಆರಿಸಿಕೊಳ್ಳಲಾಗಿದೆ.

ಸಿನಿಮಾಗೆ ತಿಮ್ಮನ ಮೊಟ್ಟೆಗಳು ಎಂದು ಟೈಟಲ್ ಇಡಲಾಗಿದ್ದು, ಮುಂದಿನ 15 ದಿನಗಳಲ್ಲಿ ಶೂಟಿಂಗ್ ಆರಂಭವಾಗಲಿದೆ. ಈ ಹಿಂದೆ ನಾನು, ರಕ್ಷಿತ್ ಹಾಗೂ ಹೇಮಂತ್ ಜೋಯಿಸ್ ಜೊತೆಗೂಡಿ ಕೆಲವು ವಿಡಿಯೋ ಸಾಂಗ್ ಗಳನ್ನು ಬಿಡುಗಡೆ ಮಾಡಿದ್ದೆವು.

ಈ ಹಾಡುಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಪ್ರಯತ್ನ ಕೂಡ ಮಾಡಲಾಗಿತ್ತು. ಈಗ ನಾನು ಆರಂಭಿಸಿರುವ ಶ್ರೀಕೃಷ್ಣ ಪ್ರೊಡಕ್ಷನ್ಸ್ ನಿರ್ಮಾಣ ಸಂಸ್ಥೆ ಮೂಲಕ ಸದಭಿರುಚಿ ಚಿತ್ರಗಳನ್ನು ನಿರ್ಮಿಸಬೇಕೆಂಬ ಉದ್ದೇಶದಿಂದ ಮೊದಲ ಚಿತ್ರವಾಗಿ “ತಿಮ್ಮನ ಮೊಟ್ಟೆಗಳು” ಚಿತ್ರವನ್ನು ನಿರ್ಮಿಸುತ್ತಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಆದರ್ಶ್ ಅಯ್ಯಂಗಾರ್ ಹೇಳಿದ್ದಾರೆ. ನನ್ನ ಎಲ್ಲಾ ಚಿತ್ರಗಳಲ್ಲೂ ಪಶ್ಚಿಮ ಘಟ್ಟದ ಜೀವನ ಶೈಲಿಯ ಮೇಲೆ ಬೆಳಕು ಚೆಲ್ಲಲಾಗುತ್ತೆ. ಇಲ್ಲಿಯೂ ಸಹ ಹೊಸ ವಿಷಯವನ್ನು ಹೇಳ ಹೊರಟಿದ್ದೇನೆ. ಸದ್ಯದಲ್ಲೇ ಚಿತ್ರೀಕರಣ ಆರಂಭಿಸುತ್ತೇವೆ ಎಂದು ನಿರ್ದೇಶಕ ರಕ್ಷಿತ್ ತೀರ್ಥಹಳ್ಳಿ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...