Wednesday, February 4, 2026
Wednesday, February 4, 2026

ತೀರ್ಥಹಳ್ಳಿಯ ಲೇಖಕರ ಕಾದಂಬರಿ ಸಿನಿಮಾ ಆಗುತ್ತಿದೆ

Date:

ಶ್ರೀ ಕೃಷ್ಣ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾಗೆ ರಕ್ಷಿತ್ ತೀರ್ಥಹಳ್ಳಿ ಬರೆದಿರುವ ಕಾಡಿನ ನೆಂಟರು ಎಂಬ ಕಾದಂಬರಿಯಿಂದ ಕಥೆ ಆರಿಸಿಕೊಳ್ಳಲಾಗಿದೆ. ಸಿನಿಮಾಗೆ ತಿಮ್ಮನ ಮೊಟ್ಟೆಗಳು ಎಂದು ಟೈಟಲ್ ಇಡಲಾಗಿದೆ. ಆದರ್ಶ್ ಅಯ್ಯಂಗಾರ್ ಚೊಚ್ಚಲ ನಿರ್ಮಾಣ ಸಿನಿಮಾಗೆ ರಕ್ಷಿತ್ ತೀರ್ಥಹಳ್ಳಿ ನಿರ್ದೇಶನ ಮಾಡಲಿದ್ದಾರೆ. ಶ್ರೀ ಕೃಷ್ಣ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾಗೆ ರಕ್ಷಿತ್ ತೀರ್ಥಹಳ್ಳಿ ಬರೆದಿರುವ ಕಾಡಿನ ನೆಂಟರು ಎಂಬ ಕಾದಂಬರಿಯಿಂದ ಕಥೆ ಆರಿಸಿಕೊಳ್ಳಲಾಗಿದೆ.

ಸಿನಿಮಾಗೆ ತಿಮ್ಮನ ಮೊಟ್ಟೆಗಳು ಎಂದು ಟೈಟಲ್ ಇಡಲಾಗಿದ್ದು, ಮುಂದಿನ 15 ದಿನಗಳಲ್ಲಿ ಶೂಟಿಂಗ್ ಆರಂಭವಾಗಲಿದೆ. ಈ ಹಿಂದೆ ನಾನು, ರಕ್ಷಿತ್ ಹಾಗೂ ಹೇಮಂತ್ ಜೋಯಿಸ್ ಜೊತೆಗೂಡಿ ಕೆಲವು ವಿಡಿಯೋ ಸಾಂಗ್ ಗಳನ್ನು ಬಿಡುಗಡೆ ಮಾಡಿದ್ದೆವು.

ಈ ಹಾಡುಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಪ್ರಯತ್ನ ಕೂಡ ಮಾಡಲಾಗಿತ್ತು. ಈಗ ನಾನು ಆರಂಭಿಸಿರುವ ಶ್ರೀಕೃಷ್ಣ ಪ್ರೊಡಕ್ಷನ್ಸ್ ನಿರ್ಮಾಣ ಸಂಸ್ಥೆ ಮೂಲಕ ಸದಭಿರುಚಿ ಚಿತ್ರಗಳನ್ನು ನಿರ್ಮಿಸಬೇಕೆಂಬ ಉದ್ದೇಶದಿಂದ ಮೊದಲ ಚಿತ್ರವಾಗಿ “ತಿಮ್ಮನ ಮೊಟ್ಟೆಗಳು” ಚಿತ್ರವನ್ನು ನಿರ್ಮಿಸುತ್ತಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಆದರ್ಶ್ ಅಯ್ಯಂಗಾರ್ ಹೇಳಿದ್ದಾರೆ. ನನ್ನ ಎಲ್ಲಾ ಚಿತ್ರಗಳಲ್ಲೂ ಪಶ್ಚಿಮ ಘಟ್ಟದ ಜೀವನ ಶೈಲಿಯ ಮೇಲೆ ಬೆಳಕು ಚೆಲ್ಲಲಾಗುತ್ತೆ. ಇಲ್ಲಿಯೂ ಸಹ ಹೊಸ ವಿಷಯವನ್ನು ಹೇಳ ಹೊರಟಿದ್ದೇನೆ. ಸದ್ಯದಲ್ಲೇ ಚಿತ್ರೀಕರಣ ಆರಂಭಿಸುತ್ತೇವೆ ಎಂದು ನಿರ್ದೇಶಕ ರಕ್ಷಿತ್ ತೀರ್ಥಹಳ್ಳಿ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...