Sunday, May 17, 2026
Sunday, May 17, 2026

ಬಿಜೆಪಿಗೆ ಪ್ರತಿರೋಧ ಒಡ್ಡಲು ದಕ್ಷಿಣದಲ್ಲಿ ತೃತೀಯ ರಂಗ ಉದಯ

Date:

2024ರ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ರಾಷ್ಟ್ರೀಯ ಪಕ್ಷವನ್ನ ಸ್ಥಾಪನೆ ಮಾಡಿದ್ದಾರೆ.
ತಮ್ಮ ಹೊಸ ಪಕ್ಷಕ್ಕೆ ‘ಭಾರತ್ ರಾಷ್ಟ್ರ ಸಮಿತಿ’ ಎಂದು ನಾಮಕರಣ ಮಾಡಿ ಘೋಷಿಸಿದ್ದಾರೆ.

ತೆಲಂಗಾಣ ಭವನ’ದಲ್ಲಿ ನಡೆದ ಕಾರ್ಯಕ್ರಮದಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ ನಾಯಕರು, ಜೆಡಿಎಸ್ ನಾಯಕರು ಹಾಗೂ ತೃತೀಯರ ರಂಗ ಬೆಂಬಲಿತರು ಭಾಗಿಯಾಗಿದ್ದರು. ಈ ಮೂಲಕ ದೇಶದಲ್ಲಿ ತೆಲಂಗಾಣ ಸಿಎಂ ಕೆಸಿಆರ್‌ ಹೊಸ ಪಕ್ಷ ಕಟ್ಟುವ ಕನಸು ಇವತ್ತು ಸಾಕಾರಗೊಂಡಿದೆ. ಮುಂದಿನ ಚುನಾವಣೆಗಳನ್ನ ಗಮನದಲ್ಲಿಟ್ಟುಕೊಂಡು ಪ್ರಾದೇಶಿಕ ಪಕ್ಷಗಳು ಒಗ್ಗಟ್ಟಿನ ಸಮರ ಸಾರಲು ಕೆಸಿಆರ್‌ ಹೊಸಪಡೆಯನ್ನ ಕಟ್ಟಿದ್ದಾರೆ.

ಓಡುವ ಕುದುರೆ ಎನ್‌ಡಿಎಗೆ ಲಗಾಮು ಹಾಕಲು, ಕುಗ್ಗುತ್ತಿರೋ ಕಾಂಗ್ರೆಸ್‌ನ ನೆಲಕಚ್ಚಿಸಲು ಕೆಸಿಆರ್‌ರ ಹೊಸ ಪಕ್ಷ ಇವತ್ತು ಉದಯವಾಗಿದೆ.
2024ಕ್ಕೆ ನರೇಂದ್ರ ಮೋದಿ ಎನ್‌ಡಿಎ ಸರ್ಕಾರದ 5 ವರ್ಷದ ಅವಧಿ ಮಕ್ತಾಯವಾಗಲಿದೆ. ದೇಶದಲ್ಲಿ ಮತ್ತೆ ಲೋಕಸಭೆ ಚುನಾವಣೆ ನಡೆಯಲಿದೆ.

ಹೀಗಾಗಿ ರಾಷ್ಟ್ರ ರಾಜಕೀಯದಲ್ಲಿ ತೃತೀಯ ರಂಗ ತಲೆ ಎತ್ತುವ ಎಲ್ಲಾ ಚರ್ಚೆಗಳು ಆರಂಭವಾಗಿವೆ. ಅದರಲ್ಲೂ ದೇಶದಲ್ಲಿ ಬಿಜೆಪಿಯ ನಾಗಾಲೋಟಕ್ಕೆ ಬ್ರೇಕ್‌ ಹಾಕಲು ತೆಲಂಗಾಣ ಸಿಎಂ ಹೊಸ ಪಕ್ಷ ಹುಟ್ಟುಹಾಕಲು ಸಿದ್ಧರಾಗಿದ್ದಾರೆ. ಈ ಮೂಲಕ ಕೆ. ಚಂದ್ರಶೇಖರ್ ರಾವ್ ಪ್ರಧಾನಿ ಹುದ್ದೆಯ ಕನಸನ್ನ ಹಿಂಬಾಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...