Monday, February 2, 2026
Monday, February 2, 2026

78 ಲಕ್ಷ ರೈತರ ಜಮೀನುಗಳ ಸರ್ವೇ ನಂಬರುಗಳಿಗೆ ಆಧಾರ್ ಜೋಡಣೆ-ಬೊಮ್ಮಾಯಿ

Date:

ಕೃಷಿ ಕ್ಷೇತ್ರದ ಡಿಜಿಟಲೀಕರಣದಲ್ಲಿ ಮುಂಚೂಣಿಯಲ್ಲಿರುವ ರಾಜ್ಯದಲ್ಲಿ ರೈತರ ಜಮೀನುಗಳ ಸರ್ವೆ ನಂಬರ್‌ಗೆ ಆಧಾರ್‌ ಜೋಡಿಸುವ ಪ್ರಕ್ರಿಯೆ ನಡೆಯುತ್ತಿದೆ. ಇದುವರೆಗೆ 78 ಲಕ್ಷ ರೈತರನ್ನು ಈ ವ್ಯಾಪಿಗೆ ತರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್‌ ಶಾ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ನೈಸರ್ಗಿಕ ಮತ್ತು ಡಿಜಿಟಲ್‌ ಕೃಷಿ ಕುರಿತ ವರ್ಚುವಲ್‌ ವಿಡಿಯೋ ಸಂವಾದದಲ್ಲಿ ಗೃಹ ಕಚೇರಿ ಕೃಷ್ಣಾದಿಂದ ಪಾಲ್ಗೊಂಡು ಅವರು ಮಾತನಾಡಿದರು.

ರಾಜ್ಯದಲ್ಲಿ ಭೂಮಿ ತಂತ್ರಜ್ಞಾನದಡಿ ಈ ಹಿಂದೆಯೇ ಡಿಜಿಟಲೀಕರಣವಾಗಿದೆ. 62 ಲಕ್ಷ ಭೂಮಿಯುಳ್ಳ ಹಾಗೂ 16 ಲಕ್ಷ ಭೂ ರಹಿತರನ್ನೂ ತಂತ್ರಾಂಶದಲ್ಲಿ ಸೇರಿಸಲಾಗಿದೆ. ರಾಜ್ಯದಲ್ಲಿ ಜಾರಿಗೆ ತಂದ ಫಟ್ಸ್‌ ಯೋಜನೆಯನ್ನು ಎಲ್ಲ ರಾಜ್ಯಗಳೂ ಅಳವಡಿಸಿಕೊಳ್ಳುತ್ತಿವೆ. ಈ ತಂತ್ರಾಂಶವನ್ನು ನಿರಂತರವಾಗಿ ಸುಧಾರಣೆ ಮಾಡಲಾಗುತ್ತಿದೆ. ಜತೆಗೆ ಡಿಜಿಟಲ್‌ ತಂತ್ರಜ್ಞಾನದ ಮೂಲಕ ತಮ್ಮ ಭೂಮಿ ಹಾಗೂ ಬೆಳೆ ಸಮೀಕ್ಷೆಯನ್ನೂ ರೈತರೇ ಮಾಡುತ್ತಿದ್ದಾರೆ. ಈವರೆಗೆ 212 ಕೋಟಿ ಭೂ ಪ್ರದೇಶವನ್ನು ಡಿಜಿಟಲೀಕರಣಗೊಳಿಸಲಾಗಿದೆ. 2.12 ಕೋಟಿ ಪೈಕಿ 16,584 ಭೂ ಪ್ರದೇಶವನ್ನು ರೈತರೇ ಸಮೀಕ್ಷೆ ಮಾಡಿದ್ದಾರೆ. 1.61 ಕೋಟಿ ಪ್ರದೇಶವನ್ನು ಇಲಾಖೆ ಮಾಡಿದೆ. ಯಾವುದೇ ವ್ಯಾಜ್ಯಕ್ಕೆ ಎಡೆ ಮಾಡಿಕೊಡದಿರಲು ಶೇ.100ರಷ್ಟು ರೈತರೇ ಸಮೀಕ್ಷೆ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...