Sunday, August 2, 2026
Sunday, August 2, 2026

ರಾಜ್ಯದ ಜನರ ಪ್ರೀತಿಗೆ ತಲೆಬಾಗಿದ ತಾಯಿ ಮಗ

Date:

ಕಾಂಗ್ರೆಸ್ ನ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರು ಸಕ್ಕರೆ ನಾಡಿನಲ್ಲಿ ಹೆಜ್ಜೆ ಹಾಕುವುದರ ಮುಖಾಂತರ ಕಾಂಗ್ರೆಸ್ ನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.

ಪಾದಯಾತ್ರೆಯನ್ನು ನಡೆಸುತ್ತಲೇ ಜನರ ಪ್ರೀತಿಗೆ ತಾಯಿ ಮಗ ಇಬ್ಬರು ತಲೆ ಬಾಗಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಮರಳಿ ತನ್ನ ವೈಭವ ಪಡೆಯುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸುವುದರ ಜೊತೆಗೆ ಕರುನಾಡಿನ ಜನರ ಪ್ರೀತಿಯೇ ನಮ್ಮ ಹೆಜ್ಜೆಯ ಶಕ್ತಿ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆಯು ಹಬ್ಬದ ಬಳಿಕ ಪುನರಾರಂಭಗೊಂಡಿತು. ನಿನ್ನೆ (ಗುರುವಾರ) ಮಂಡ್ಯ ಜಿಲ್ಲೆಯ ಪಾಂಡವಪುರದ ಬೆಳ್ಳಾಳೆ ಯಿಂದ ನಡಿಗೆ ಆರಂಭವಾಯಿತು. ರಾಹುಲ್ ಗಾಂಧಿ ಜೊತೆ ಸೋನಿಯಾ ಗಾಂಧಿ ಕೂಡ ಪಾದಯಾತ್ರೆಯಲ್ಲಿ ಸುಮಾರು 2 ಕಿಲೋಮೀಟರ್ ಹೆಜ್ಜೆ ಹಾಕಿರುವುದು ವಿಶೇಷವಾಗಿದೆ. ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಯನ್ನು ನೋಡಲು ಸಾವಿರಾರು ಮಂದಿ ಈ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ರಾಜ್ಯದಲ್ಲಿ ನಡೆದ 7ನೇ ದಿನದ ಯಾತ್ರೆಯಲ್ಲಿ ಅನೇಕ ಕಾಂಗ್ರೆಸ್ ನಾಯಕರು, ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...