Sunday, December 14, 2025
Sunday, December 14, 2025

ಕೇಂದ್ರ ನೌಕರರಿಗೆ‌ ಸಿಹಿಸುದ್ದಿ

Date:

ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರ ಶೇ. 3ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಗ್ರೀನ್‌ ಸಿಗ್ನಲ್ ನೀಡಿತ್ತು. ಈ ಹೆಚ್ಚಳದ ನಂತರ ಒಟ್ಟು ತುಟ್ಟಿ ಭತ್ಯೆ 31% ಆಗಲಿದೆ. ತುಟ್ಟಿ ಭತ್ಯೆ ಮತ್ತು ತುಟ್ಟಿ ಭತ್ಯೆ ಪರಿಹಾರದ ಹೆಚ್ಚಳದಿಂದ 47.14 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.62 ಲಕ್ಷ ಪಿಂಚಣಿದಾರರು ಲಾಭ ಪಡೆಯಲಿದ್ದಾರೆ.

ಇದರಿಂದ ಕೇಂದ್ರದ ಖಜಾನೆ ಮೇಲೆ ಪ್ರತಿ ವರ್ಷ 34,400 ಕೋಟಿ ಹೊರೆಯಾಗಲಿದೆ. ಜುಲೈ 1, 2021 ರಿಂದ ಈ ಭತ್ಯೆ ಅನ್ವಯಿಸುತ್ತದೆ ಎಂದು ಕೇಂದ್ರ ಮಂತ್ರಿ ಅನುರಾಗ್‌ ಠಾಕೂರ್‌ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದರು.

ಕೊರೋನಾ ವೈರಸ್‌ ಕಾರಣದಿಂದಾಗಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಜನವರಿ 1 2020, ಜುಲೈ 1 2020 ಮತ್ತು ಜನವರಿ 1 2021 ಒಟ್ಟು ಮೂರು ಕಂತಿನ ತುಟ್ಟಿಭತ್ಯೆ (ಡಿಎ) ಹಾಗೂ ತುಟ್ಟಿ ಭತ್ಯೆ ಪರಿಹಾರ (ಡಿಆರ್‌) ಮೊತ್ತವನ್ನು ತಡೆಹಿಡಿಯಲಾಗಿತ್ತು.

ಒಂದು ವರ್ಷದ ನಂತರ ಜುಲೈ ತಿಂಗಳನಲ್ಲಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ನೀಡಲಾಗುವ ಡಿಯರ್ನೆಸ್ ಅಲಾವೆನ್ಸ (DA) ಮತ್ತು ಡಿಯರ್ನೆಸ್ ರಿಲೀಫ್ (DR) ಅನ್ನು ಶೇ .17 ರಿಂದ 28 ಕ್ಕೆ ಹೆಚ್ಚಿಸಲು ಕೇಂದ್ರವು ಅನುಮೋದನೆ ನೀಡಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...