Tuesday, December 9, 2025
Tuesday, December 9, 2025

ಬಿಜೆಪಿಗೆ ರೈತರು ಬಡವರ ಬಗ್ಗೆ ಕಾಳಜಿ ಇಲ್ಲ-ರಾಹುಲ್ ಗಾಂಧಿ

Date:

ಬಿಜೆಪಿಗೆ ರೈತರ ಹಾಗೂ ಬಡವರ ಬಗ್ಗೆ ಕಾಳಜಿ ಇಲ್ಲವೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ‘ಭಾರತ್ ಜೋಡೋ ಯಾತ್ರೆ’ಯಲ್ಲಿ ರಾಹುಲ್ ಮಾತನಾಡಿರುವ ವಿಡಿಯೋವನ್ನು ತನ್ನ ಟ್ವಿಟರ್ ಖಾತೆಯಲ್ಲಿ ಕಾಂಗ್ರೆಸ್ ಪಕ್ಷ ಹಂಚಿಕೊಂಡಿದೆ.

‘ನಾನು ಯಾತ್ರೆಯುದ್ದಕ್ಕೂ ರೈತರೊಂದಿಗೆ ಸಂವಾದ ನಡೆಸುತ್ತಾ ಬಂದಿದ್ದೇನೆ. ರೈತರನ್ನು ಎಲ್ಲೂ ಕಡೆಯಿಂದಲೂ ಹಿಂಡಿ ಹಾಕಲಾಗಿದೆ. ರೈತರಿಗೆ ನೀಡಬೇಕಾದ ಬೆಂಬಲ ಬೆಲೆ ನೀಡುತ್ತಿಲ್ಲ.‌ ಇನ್ನೊಂದೆಡೆ ಇದೇ ಮೊದಲ ಬಾರಿಗೆ ಕೃಷಿಗೂ GST ಹಾಕಲಾಗಿದೆ. ಟ್ರಾಕ್ಟರ್, ಕೀಟನಾಶಕ, ರಸಗೊಬ್ಬರಕ್ಕೂ GST ಕಟ್ಟಬೇಕಾಗಿದೆ’ ಎಂದು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಕೃಷಿ ಕಾಯ್ದೆಗಳು, ನೋಟು ಅಮಾನ್ಯೀಕರಣ ಮತ್ತು GSTಗಳು ಮಾರಕ ಅಸ್ತ್ರಗಳು.‌ ಇವು ಕೇವಲ ಕೇಂದ್ರದ ನೀತಿಗಳಲ್ಲ. ಬದಲಾಗಿ ಭಾರತದ ಜನರ ಮೇಲೆ, ರೈತರ ಮೇಲೆ, ಕಾರ್ಮಿಕರ, ಸಣ್ಣ ಉದ್ಯಮದ ಮೇಲೆ ದಾಳಿ ಮಾಡಲು ಬಳಸಿದ ಅಸ್ತ್ರಗಳು.‌ ಈ ಅಸ್ತ್ರಗಳಿಂದ ಲಕ್ಷಾಂತರ ರೈತರು, ಕೂಲಿ ಕಾರ್ಮಿಕರು, ಸಣ್ಣ ಉದ್ದಿಮೆಗಳು ನಾಶವಾಗಿವೆ. ಏಕೆ ನಮ್ಮ ಜೀವನ, ಇತಿಹಾಸ, ಭಾಷೆ, ಸಂಸ್ಕೃತಿ, ಕನ್ನಡ ಇವುಗಳ ಮೇಲೆ ದಾಳಿಯಾಗುತ್ತಿದೆ? ನಮ್ಮ ಭವ್ಯವಾದ ಇತಿಹಾಸ, ಬಸವಣ್ಣನವರ ಪರಂಪರೆಯನ್ನು ಪಠ್ಯಪುಸ್ತಕದಿಂದ ಏಕೆ ಅಳಿಸಿ ಹಾಕಲಾಗುತ್ತಿದೆ? ಯಾವ ಶಕ್ತಿ ಬಸವಣ್ಣನವರ ಮೇಲೆ ದಾಳಿ ಮಾಡುತ್ತಿದೆ?’ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

L.B. Colleges ಸಾಗರದ ಎಲ್ .ಬಿ‌.ಕಾಲೇಜಿನ ಮುಖ್ಯದ್ವಾರಕ್ಕೆ ಶಿಲಾನ್ಯಾಸ.

L.B. Colleges ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ನೆಡೆಸುತ್ತಿರುವ ಲಾಲ್ ಬಹದ್ದೂರ್ ಕಲಾ,...

Shimoga News ಮಕ್ಕಳು ಉತ್ಸಾಹದ ಚಿಲುಮೆಗಳು.ಉತ್ತಮ ಊಟ ಆಟ ಪಾಠದೊಂದಿಗೆ ಸಮಾಜದ ಅಭಿವೃದ್ಧಿ- ನ್ಯಾ.ಎಂ.ಎಸ್.ಸಂತೋಷ್

Shimoga News ಮಕ್ಕಳು ಉತ್ಸಾಹದ ಚಿಲುಮೆಗಳಾಗಿದ್ದು, ಉತ್ತಮ ಊಟ-ಆಟ-ಪಾಠದೊಂದಿಗೆ ಪ್ರಗತಿ ಹೊಂದಿ...

YADAV School Of Chess ಆನ್ ಲೈನ್ ಮೂಲಕಹಿಂದುಳಿದ & ಬಡಮಕ್ಕಳಿಗೆಒಂದು ತಿಂಗಳ ಚೆಸ್ ಕ್ರೀಡಾ ತರಬೇತಿ

YADAV School Of Chess ರಾಜೇಂದ್ರ ನಗರದಲ್ಲಿರುವ ಪ್ರತಿಷ್ಠಿತ ಯಾದವ ಸ್ಕೂಲ್...

Vallabhbhai Patel ಭ್ರಷ್ಟಾಚಾರವು ದೇಶದ ಆಂತರಿಕ ಶತ್ರು.- ಡಾ.ಹೆಚ್.ಬಿ.ಮಂಜುನಾಥ್

ಮಹಾತ್ಮ ಗಾಂಧಿ, ಸರ್ದಾರ್ ಪಟೇಲ್ ಸ್ಮರಣೆಯಲ್ಲಿ ಹಿರಿಯ ಪತ್ರಕರ್ತ ಡಾ ಎಚ್...