Thursday, March 19, 2026
Thursday, March 19, 2026

ಅಡಕೆ ಬೆಳೆ ವಿಮೆ ದಕ್ಷಿಣ ಕನ್ನಡದಲ್ಲೇ ಅಧಿಕ ನೋಂದಣಿ

Date:

ಹವಾಮಾನ ಆಧರಿತ ವಿಮಾ ಯೋಜನೆಯು ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರ ನೆರವಿಗೆ ಬಂದಿದ್ದು, ಇಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ.

ಅತಿವೃಷ್ಟಿ, ಕೊಳೆರೋಗ, ನಳ್ಳಿ (ಎಳೆ ಅಡಿಕೆ) ಉದುರುವುದು ಇತ್ಯಾದಿ ಸಮಸ್ಯೆಗಳು ಜಿಲ್ಲೆಯ ಅಡಿಕೆ ಕೃಷಿಕರನ್ನು ಬಾಧಿಸುತ್ತಿವೆ. ಬೇಸಗೆಯ ಕೊನೆಯಲ್ಲಿ ಬಿಸಿಲಿನ ಝಳಕ್ಕೆ ಎಳೆ ಅಡಿಕೆ ಉದು ರುವುದು, ಜೂನ್‌ -ಜುಲೈ ತಿಂಗಳ ಸತತ ತೀವ್ರ ಮಳೆಯಿಂದಾಗಿ ಕೊಳೆರೋಗ ಉಂಟಾಗುತ್ತದೆ.
2016-17ರಲ್ಲಿ ಈ ಯೋಜನೆ ಆರಂಭವಾದಾಗ ಜಿಲ್ಲೆಯ ರೈತರಿಗೆ ಅದರ ಪ್ರಯೋಜನದ ಅರಿವು ಅಷ್ಟಾಗಿ ಇರಲಿಲ್ಲ. ಬಳಿಕ ಮನದಟ್ಟಾಗತೊಡಗಿದ್ದು, ಮೂರು ವರ್ಷಗಳಿಂದ ನೋಂದಣಿ ಮಾಡಿಕೊಳ್ಳು ವವರ ಸಂಖ್ಯೆ ಗಮನಾರ್ಹವಾಗಿ ಹೆಚ್ಚಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದಲ್ಲೇ ಗರಿಷ್ಠ ವಿಮಾ ಮೊತ್ತವೂ ದ.ಕ. ಜಿಲ್ಲೆಯಲ್ಲೇ ವಿತರಣೆಯಾಗುತ್ತಿದೆ.
ಜಿಲ್ಲೆಯಲ್ಲಿ 2020-21 ಸಾಲಿ ನಲ್ಲಿ 100 ಕೋ.ರೂ. ಮೊತ್ತ ವಿಮಾ ರೂಪದಲ್ಲಿ ವಿತರಣೆಯಾಗಿದೆ, 2021-22ರ ಸಾಲಿನ ಮೊತ್ತ ಇನ್ನೂ ವಿತರಣೆ ಆಗಿಲ್ಲ, ಆದರೆ ಈ ವರ್ಷದ ಮೊತ್ತ 150 ಕೋಟಿ ರೂ. ಮೀರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಹವಾಮಾನ ಆಧರಿತ ವಿಮೆ ವ್ಯವಸ್ಥಿತ, ವೈಜ್ಞಾನಿಕ ಯೋಜನೆ. ಇದರಲ್ಲಿ ಮಳೆಯ ತೀವ್ರತೆ, ಮುಂದುವರಿದ ಮಳೆ ಮತ್ತು ತಾಪಮಾನ ಎಂಬ 3 ವಿಭಾಗಗಳಡಿ ನಷ್ಟ ಅಂದಾಜಿಸಲಾಗುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...