Wednesday, May 6, 2026
Wednesday, May 6, 2026

ಅಡಕೆ ಬೆಳೆ ವಿಮೆ ದಕ್ಷಿಣ ಕನ್ನಡದಲ್ಲೇ ಅಧಿಕ ನೋಂದಣಿ

Date:

ಹವಾಮಾನ ಆಧರಿತ ವಿಮಾ ಯೋಜನೆಯು ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರ ನೆರವಿಗೆ ಬಂದಿದ್ದು, ಇಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ.

ಅತಿವೃಷ್ಟಿ, ಕೊಳೆರೋಗ, ನಳ್ಳಿ (ಎಳೆ ಅಡಿಕೆ) ಉದುರುವುದು ಇತ್ಯಾದಿ ಸಮಸ್ಯೆಗಳು ಜಿಲ್ಲೆಯ ಅಡಿಕೆ ಕೃಷಿಕರನ್ನು ಬಾಧಿಸುತ್ತಿವೆ. ಬೇಸಗೆಯ ಕೊನೆಯಲ್ಲಿ ಬಿಸಿಲಿನ ಝಳಕ್ಕೆ ಎಳೆ ಅಡಿಕೆ ಉದು ರುವುದು, ಜೂನ್‌ -ಜುಲೈ ತಿಂಗಳ ಸತತ ತೀವ್ರ ಮಳೆಯಿಂದಾಗಿ ಕೊಳೆರೋಗ ಉಂಟಾಗುತ್ತದೆ.
2016-17ರಲ್ಲಿ ಈ ಯೋಜನೆ ಆರಂಭವಾದಾಗ ಜಿಲ್ಲೆಯ ರೈತರಿಗೆ ಅದರ ಪ್ರಯೋಜನದ ಅರಿವು ಅಷ್ಟಾಗಿ ಇರಲಿಲ್ಲ. ಬಳಿಕ ಮನದಟ್ಟಾಗತೊಡಗಿದ್ದು, ಮೂರು ವರ್ಷಗಳಿಂದ ನೋಂದಣಿ ಮಾಡಿಕೊಳ್ಳು ವವರ ಸಂಖ್ಯೆ ಗಮನಾರ್ಹವಾಗಿ ಹೆಚ್ಚಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದಲ್ಲೇ ಗರಿಷ್ಠ ವಿಮಾ ಮೊತ್ತವೂ ದ.ಕ. ಜಿಲ್ಲೆಯಲ್ಲೇ ವಿತರಣೆಯಾಗುತ್ತಿದೆ.
ಜಿಲ್ಲೆಯಲ್ಲಿ 2020-21 ಸಾಲಿ ನಲ್ಲಿ 100 ಕೋ.ರೂ. ಮೊತ್ತ ವಿಮಾ ರೂಪದಲ್ಲಿ ವಿತರಣೆಯಾಗಿದೆ, 2021-22ರ ಸಾಲಿನ ಮೊತ್ತ ಇನ್ನೂ ವಿತರಣೆ ಆಗಿಲ್ಲ, ಆದರೆ ಈ ವರ್ಷದ ಮೊತ್ತ 150 ಕೋಟಿ ರೂ. ಮೀರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಹವಾಮಾನ ಆಧರಿತ ವಿಮೆ ವ್ಯವಸ್ಥಿತ, ವೈಜ್ಞಾನಿಕ ಯೋಜನೆ. ಇದರಲ್ಲಿ ಮಳೆಯ ತೀವ್ರತೆ, ಮುಂದುವರಿದ ಮಳೆ ಮತ್ತು ತಾಪಮಾನ ಎಂಬ 3 ವಿಭಾಗಗಳಡಿ ನಷ್ಟ ಅಂದಾಜಿಸಲಾಗುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...