Thursday, March 19, 2026
Thursday, March 19, 2026

ನ್ಯಾ.ಸದಾಶಿವ ಆಯೋಗದ ವರದಿ ಪರಿಶೀಲಿಸಿ ಸೂಕ್ತ ಕ್ರಮ- ಬೊಮ್ಮಾಯಿ

Date:

ಅವಕಾಶ ವಂಚಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ಎಸ್ಸಿ ಎಸ್ಟಿ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ನಿಗಮ ರಚಿಸಲು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಳಸಮುದಾಯಗಳಿಗೆ ಮೀಸಲಾತಿ ಪೂರ್ಣಪ್ರಮಾಣದಲ್ಲಿ ಮುಟ್ಟಿಲ್ಲ ಎಂದು ನ್ಯಾ.ನಾಗಮೋಹನ್ ದಾಸ್ ಸಮಿತಿ ವರದಿ ಹೇಳಿದ್ದು, ಇವರಿಗೆ ನ್ಯಾಯ ಒದಗಿಸಲು ಕೂಲಂಕಷವಾಗಿ ಕಾನೂನಾತ್ಮಕ ಅಂಶಗಳನ್ನು ತಜ್ಞರು ಪರಿಶೀಲಿಸಿ, ಮುಂದೆ ಕ್ರಮ ತೆಗೆದುಕೊಳ್ಳಬಹುದೆಂದು ಹೇಳಿದ್ದಾರೆ. ಒಳಮೀಸಲಾತಿ ಬಗ್ಗೆ ಬಗ್ಗೆ ಅಧ್ಯಯನ ಮಾಡಿರುವ ಸದಾಶಿವ ಆಯೋಗದ ಪ್ರಮುಖ ಅಂಶಗಳನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅದರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅದಕ್ಕೂ ಮುನ್ನ ಪರಿಶಿಷ್ಟ ಜಾತಿಯಲ್ಲಿ ಬರುವ ಎಲ್ಲಾ ಜಾತಿಗಳ ಹಿತರಕ್ಷಣೆ ಮಾಡುವ ಸಲುವಾಗಿ ಮತ್ತು ಒಳಮೀಸಲಾತಿಯಿಂದ ಪರಿಣಾಮ ಬೀರುವ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಇನ್ನು ಪರಿಶಿಷ್ಟ ಜಾತಿಯಲ್ಲಿರುವ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ನಿಗಮ ಸ್ಥಾಪಿಸಲು ತೀರ್ಮಾನಿಸಲಾಗಿದೆ. ಇದು ಅಧಿಕೃತವಾಗಿ ಚರ್ಚೆ ಮಾಡಿ ಕೈಗೊಂಡಿರುವ ತೀರ್ಮಾನ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...