Sunday, July 13, 2025
Sunday, July 13, 2025

ದಲಿತರಿಗೆ ಸಾಮಾಜಿಕ ಸ್ವಾತಂತ್ರ್ಯ ಸೇರಿದರೆ ಅರ್ಥಪೂರ್ಣ

Date:

ಹಿಂದುಳಿದ ಸಮುದಾಯದ ಅಭಿವೃದ್ಧಿಗೆ ಕೇವಲ ಕಾನೂನು ತಂದರೆ ಸಾಲದು. ಅವರ ಉನ್ನತಿ ಖಾತ್ರಿಪಡಿಸಿಕೊಳ್ಳಲು ಜನರ ಮನಸ್ಥಿತಿ ಬದಲಾಗಬೇಕಿದೆ ಎಂದು ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ್‌ ಭಾಗವತ್‌ ಪ್ರತಿಪಾದಿಸಿದರು.

ಕಾನ್ಪುರದ ನಾನಾರಾವ್‌ ಪಾರ್ಕ್‌ನಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಲೂ ವಾಲ್ಮೀಕಿ ಸಮುದಾಯ ಬಹಳ ಹಿಂದುಳಿದಿದೆ.

ಸಮುದಾಯದ ಅಭಿವೃದ್ಧಿಗೆ ಸಂವಿಧಾನದಲ್ಲಿ ನಿಬಂಧನೆಗಳನ್ನು ಮಾಡಲಾಗಿದೆ. ಆದರೆ ಇದಕ್ಕಿಂತ ಮಿಗಿಲಾಗಿ ಜನರಲ್ಲಿ ಒಳಗೊಳ್ಳುವಿಕೆ ಭಾವನೆ ಮೂಡಬೇಕಿದೆ, ಎಂದರು.

ದಲಿತರ ಉದ್ಧಾರಕ್ಕಾಗಿ ಡಾ. ಬಿ.ಆರ್‌.ಅಂಬೇಡ್ಕರ್‌ ಅವರು ಸಂವಿಧಾನದಲ್ಲಿ ಅನೇಕ ನಿಬಂಧನೆಗಳನ್ನು ತಂದರು. ಇದರಿಂದ ಎಲ್ಲರೊಂದಿಗೆ ಸಮನಾಗಿ ದಲಿತರು ಕೂರಬಹುದು. ಅವರಿಗೆ ರಾಜಕೀಯ ಮತ್ತು ಆರ್ಥಿಕ ಸ್ವಾತಂತ್ರ್ಯ ನೀಡಲಾಗಿದೆ ಎಂದು ಅಂಬೇಡ್ಕರ್‌ ಹೇಳಿದರು. ಆದರೆ ಇದರೊಂದಿಗೆ ಸಾಮಾಜಿಕ ಸ್ವಾತಂತ್ರ್ಯ ಸೇರಿದರೆ ಹೆಚ್ಚು ಅರ್ಥಪೂರ್ಣ. ಕೇವಲ ಕಾನೂನುಗಳು ಸಾಲದು. ನಮ್ಮ ಜನರಲ್ಲಿ ಈ ಬಗ್ಗೆ ಅರಿವು ಮೂಡಿಸಬೇಕಿದೆ. ಅವರ ಮನಸ್ಥಿತಿಯನ್ನು ಬದಲಿಸಬೇಕಿದೆ, ಎಂದು ಭಾಗವತ್‌ ಪ್ರತಿಪಾದಿಸಿದರು.

ದಲಿತ ಸಮುದಾಯಕ್ಕೆ ಸಾಮಾಜಿಕ ಸ್ವಾತಂತ್ರ್ಯ ದೊರಕಿಸಲು ಮತ್ತು ಸಾಮಾಜಿಕ ಸಾಮರಸ್ಯ ಹಾಗೂ ಒಳಗೊಳ್ಳುವಿಕೆ ಭಾವನೆ ಮೂಡಿಸಲು ಮತ್ತೂಬ್ಬ ಡಾ. ಸಾಹೇಬ್ ಶ್ರಮಿಸಿದರು, ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Miss Universe Karnataka ಚಿಕ್ಕಮಗಳೂರಿನ ಕು.ವಂಶಿ ಅವರಿಗೆ ಮಿಸ್ ಯೂನಿವರ್ಸ್ ಕರ್ನಾಟಕ ಪುರಸ್ಕಾರ

Miss Universe Karnataka ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ...

Department of Agriculture ಶೇ 48. ರಷ್ಟು ಮಾರುಕಟ್ಟೆ ಶುಲ್ಕ ವಿಧಿಸಲು ಅವಕಾಶ ಬೇಕೆಂಬ ಮನವಿಯನ್ನ ಪರಿಶೀಲಿಸಲಾಗುತ್ತದೆ- ಸಚಿವ ಶಿವಾನಂದ ಪಾಟೀಲ್

Department of Agriculture ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಮಾರುಕಟ್ಟೆ ಶುಲ್ಕವನ್ನು ಈ ಮೊದಲಿನಂತೆ...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಅರ್ಹತೆಗಳಲ್ಲಿ‌ ತಿದ್ದುಪಡಿ ಆದೇಶ

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಗಾಗಿ ತಿದ್ದುಪಡಿ ಆದೇಶ ಹೊರಡಿಸಲಾಗಿದ್ದು,...

University of Horticultural Sciences ಕೃಷಿ ಪದವಿಧರರು ಕೃಷಿಮಾಡಿ ಅಭಿವೃದ್ಧಿಗೆ ಕೊಡುಗೆ ನೀಡಿ-ನಟ ಶಶಿಕುಮಾರ್

ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ...