Wednesday, March 25, 2026
Wednesday, March 25, 2026

ಶಿವಮೊಗ್ಗದ ಈರ್ವರು ವಿಜ್ಞಾನಿಗಳ ಪಟ್ಟಿಯಲ್ಲಿ ಟಾಪ್

Date:

ಅಮೇರಿಕದ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಟಾಪ್ ಶೇ. 02ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಡಾ. ಬಿ. ಜೆ. ಗಿರೀಶ್ ಮತ್ತು ಡಾ. ಬಿ. ಇ. ಕುಮಾರಸ್ವಾಮಿ ಸ್ಥಾನ ಮತ್ತೊಮ್ಮೆ ಪಡೆದಿದ್ದಾರೆ.

ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟಾನ್‌ಫೋರ್ಡ್ ವಿವಿಯ ಜೆರೋಯಿನ ಬಾಸ್, ಕೆವಿನ್ ಬೋಯಾಕ್ ಮತ್ತು ಡಾ. ಜಾನ್ ಇವೊನ್ನಿಡಿಸ್ ಸಂಶೋಧನಾ ತಂಡವು ವಿಶ್ವದ ಅಗ್ರ ಶೇ. 2 ವಿಜ್ಞಾನಿಗಳ ಡೇಟಾಬೇಸ್ ಅನ್ನು ಅ. 10ರಂದು ಬಿಡುಗಡೆ ಮಾಡಿದ್ದು ಅಂತರ್ಜಾಲದಲ್ಲಿ ಮುಕ್ತವಾಗಿ ಲಭ್ಯವಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೈಗೊಂಡ ಸಂಶೋಧನಾ ಪ್ರಕಟಣೆಗಳು, ಸಂಶೋಧನಾ ಉಲ್ಲೇಖಗಳು, ಸಹಲೇಖನಗಳು, ಹೆಚ್-ಇಂಡೆಕ್ಸ್ ಸೇರಿದಂತೆ ಹಲವು ಸಂಯೋಜಿತ ಮಾನದಂಡಗಳನ್ನು ಬಳಸಿ ಜಾಗತಿಕ ಅತ್ಯುತ್ತಮ ಒಂದು ಲಕ್ಷ ವಿಜ್ಞಾನಿಗಳನ್ನು ಗುರುತಿಸಿ ದತ್ತಾಂಶವೊಂದನ್ನು ಪ್ರಕಟಿಸಿದ್ದಾರೆ.

ಪಟ್ಟಿಯು 22 ವಿಜ್ಞಾನ ವಿಷಯಗಳು ಮತ್ತು 176 ಉಪವಿಜ್ಞಾನ ವಿಷಯಗಳನ್ನು ವಿಂಗಡಿಸಿ ರಚಿಸಿರುವುದಾಗಿದ್ದು, ವೃತ್ತಿಜೀವಮಾನ ಸಾಧಕರು ಮತ್ತು 2022ನೇ ಸಾಲಿನ ಸಾಧಕರು ಎಂಬ ಎರಡು ವಿಭಾಗಗಳಲ್ಲಿ ಪ್ರಕಟಿಸಲಾಗಿದೆ.

2022ರ ಸಾಲಿನ ಉತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ 50,440ನೇ ಸ್ಥಾನವನ್ನು ಪಡೆದಿರುವ ವಿವಿಯ ಗಣಿತವಿಜ್ಞಾನ ಸಹಪ್ರಾಧ್ಯಾಪಕ ಡಾ. ಬಿ.ಜೆ. ಗಿರೀಶ್ ಇಂಜಿನಿಯರಿಂಗ್, ಅನ್ವಯಿಕ ಭೌತಶಾಸ್ತ್ರ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಷಯಗಳ ಕುರಿತ ಅತ್ಯುತ್ತಮ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಸತತ ನಾಲ್ಕನೇ ವರ್ಷ ಈ ಪಟ್ಟಿಯಲ್ಲಿ ಸ್ಥಾನ ಪಡೆಯುವ ಸಾಧನೆಯನ್ನು ಮಾಡಿದ್ದಾರೆ.

ಔದ್ಯೋಗಿಕ ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಬಿ. ಇ. ಕುಮಾರಸ್ವಾಮಿ 1,63,473ನೇ ಸ್ಥಾನದಲ್ಲಿದ್ದು, ಸತತ ಎರಡನೇ ವರ್ಷ ಪಟ್ಟಿಯಲ್ಲಿ ಸ್ಥಾನ ಗಳಿಸಿದ್ದಾರೆ. ಈ ವರ್ಷದ ಪಟ್ಟಿಯಲ್ಲಿ
ಭಾರತದ ವಿವಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಸುಮಾರು 2000 ಕ್ಕೂ ಅಧಿಕ ವಿಜ್ಞಾನಿಗಳು ಸ್ಥಾನ ಪಡೆದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...