Sunday, December 14, 2025
Sunday, December 14, 2025

ಕಡಿಮೆ ಬೆಲೆಗೆ ಗೃಹಬಳಕೆ ಸಿಲಿಂಡರ್ ಮಾರಾಟ ನಷ್ಟಗೊಂಡ ಕಂಪನಿಗಳಿಗೆ ನೆರವು

Date:

ಕಳೆದ ಎರಡು ವರ್ಷಗಳಲ್ಲಿ ಗೃಹಬಳಕೆಯ ಅಡುಗೆ ಅನಿಲವನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿದ್ದರಿಂದ ಉಂಟಾದ ನಷ್ಟವನ್ನು ಸರಿದೂಗಿಸಲು ಸರ್ಕಾರಿ ಸ್ವಾಮ್ಯದ ಮೂರು ಇಂಧನ ಚಿಲ್ಲರೆ ಮಾರಾಟ ಕಂಪನಿಗಳಿಗೆ ಒಂದು ಬಾರಿ ₹22,000 ಕೋಟಿ ಪರಿಹಾರ ಧನ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಎಂದು ಹೇಳಿದ್ದಾರೆ.

ಇಂಡಿಯನ್ ಆಯಿಲ್ ಕಾರ್ಪೊರೇಶನ್(ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ ಮತ್ತು ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ ಕಂಪನಿಗಳಿಗೆ ಒಂದು ಬಾರಿ ಪರಿಹಾರ ಧನ ಬಿಡುಗಡೆ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ಠಾಕೂರ್ ಹೇಳಿದ್ದಾರೆ.

ಜೂನ್ 2020 ಮತ್ತು ಜೂನ್ 2022ರ ನಡುವೆ ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ಎಲ್‌ಪಿಜಿ ಮಾರಾಟ ಮಾಡಿದ್ದರಿಂದ ಆದ ನಷ್ಟವನ್ನು ತೈಲ ಕಂಪನಿಗಳು ಈ ಸಹಾಯಧನದಿಂದ ಸರಿದೂಗಿಸಲಿವೆ.

ಜೂನ್ 2020 ಮತ್ತು ಜೂನ್ 2022ರ ನಡುವೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಎಲ್‌ಪಿಜಿ ದರ ಶೇಕಡ 300ರಷ್ಟು ಹೆಚ್ಚಾಗಿದೆ. ಆದರೆ, ಅಂತರರಾಷ್ಟ್ರೀಯ ಬೆಲೆ ವ್ಯತ್ಯಾಸದ ಭಾರವನ್ನು ಗ್ರಾಹಕರ ಮೇಲೆ ಸಂಪೂರ್ಣ ಹೇರದೆ ಶೇಕಡ 72ರಷ್ಟು ಬೆಲೆ ಏರಿಕೆ ಮಾತ್ರ ಮಾಡಲಾಗಿತ್ತು. ಹೀಗಾಗಿ, ಮೂರು ತೈಲ ಕಂಪನಿಗಳು ಗಮನಾರ್ಹ ನಷ್ಟ ಅನುಭವಿಸಿದ್ದವು ಎಂದು ತಿಳಿಸಲಾಗಿದೆ.ನಷ್ಟದ ನಡುವೆಯೂ ಈ ಮೂರು ತೈಲ ಕಂಪನಿಗಳು ದೇಶದ ಜನರಿಗೆ ಅಗತ್ಯವಾದ ಅಡುಗೆ ಅನಿಲ ಸರಬರಾಜನ್ನು ಮುಂದುವರಿಸಿದ್ದವು. ಬಳಿಕ, ಈ ಕಂಪನಿಗಳಿಗೆ ಒಂದು ಬಾರಿ ಸಹಾಯಧನ ಬಿಡುಗಡೆಗೆ ಸರ್ಕಾರ ನಿರ್ಧರಿಸಿತು’ಎಂದು ತಿಳಿಸಿದೆ.

ಈ ನಿರ್ಧಾರವು ಸರ್ಕಾರಿ ಒಡೆತನದ ತೈಲ ಕಂಪನಿಗಳು ಆತ್ಮನಿರ್ಭರ ಭಾರತ ಅಭಿಯಾನಕ್ಕೆ ತಮ್ಮ ಬದ್ಧತೆಯನ್ನು ಮುಂದುವರಿಸಲು ಸಹಾಯ ಮಾಡುತ್ತದೆ.

ಅಡೆತಡೆ ಇಲ್ಲದ ದೇಶೀಯ ಎಲ್‌ಪಿಜಿ ಪೂರೈಕೆಗಳನ್ನು ಖಾತ್ರಿಪಡಿಸುತ್ತದೆ ಮತ್ತು ಮೇಕ್ ಇನ್ ಇಂಡಿಯಾ ಉತ್ಪನ್ನಗಳ ಸಂಗ್ರಹಣೆಯನ್ನು ಬೆಂಬಲಿಸುತ್ತದೆ ಎಂದು ಹೇಳಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...