ಮುಸ್ಲಿಮರನ್ನ ಅಲ್ಪಸಂಖ್ಯಾತರ ಪಟ್ಟಿಯಿಂದ ಕೈಬಿಡುವ ವಿಚಾರವಾಗಿ ಮಾತನಾಡಿದ ಕೆ.ಎಸ್ ಈಶ್ವರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಯಾವುದೇ ವಿಚಾರ ಕೇಂದ್ರ , ರಾಜ್ಯ ಸರ್ಕಾರ ಮುಂದಿಲ್ಲ ಎಂದು ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದ್ದಾರೆ.
ಕಲಬುರ್ಗಿ ಯಲ್ಲಿ ಮಾತನಾಡಿದ ಅವರು, ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳದ ಬಗ್ಗೆ ಸಿದ್ದರಾಮಯ್ಯ ಮಾತಾಡುತ್ತಾರೆ. ಮೀಸಲಾತಿ ಹೆಚ್ಚಿಸಿದೆ.
ಸಂವಿಧಾನಬದ್ಧವಾಗಿದೆಯಾ ಎಂದು ಕೇಳುತ್ತಾರೆ. ಸರ್ವಪಕ್ಷ ಸಭೆಯಲ್ಲೇ ಸಿದ್ದರಾಮಯ್ಯೀ ಪ್ರಶ್ನೆ ಕೇಳಬೇಕಿತ್ತು. ಈಗ ಹೊರಗಡೆ ಬಂದು ಗೊಂದಲದ ಹೇಳಿಕೆ ನೀಡುತ್ತಿದ್ದಾರೆ. ಈಗ ಕುರುಬರಿಗೆ ಎಸ್ ಟಿ ಮೀಸಲಾತಿ ಕೊಡಬೇಕು ಎಂದು ಹೇಳಿದ್ದಾರೆ.
ಹಿಂದೆ ನಿಮ್ಮ ಬಾಯಿಗೆ ಏನಾಗಿತ್ತು ಎಂದು ಈಶ್ವರಪ್ಪ ಅವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.