Tuesday, March 24, 2026
Tuesday, March 24, 2026

ಸುರಕ್ಷತೆ ಬಗ್ಗೆ ವಿಚಾರ ಸಂಕಿರಣ

Date:

ಬಳ್ಳಾರಿ-ವಿಜಯನಗರ- ಕೊಪ್ಪಳ ವಲಯ ಸುರಕ್ಷತಾ ಸಮಿತಿ ವತಿಯಿಂದ ಸುರಕ್ಷತೆಯ ವಿಷಯದ ಮೇಲೆ ಒಂದು ದಿನದ ಸೆಮಿನಾರ್*

13.09.2022 ನೇ ಮಂಗಳವಾರದಂದು ಒಂದು ದಿನದ ಸೆಮಿನಾರ್ ಕಾರ್ಯಕ್ರಮ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಯ ಆವರಣದಲ್ಲಿ ಆಯೋಜಿಸಲಾಗಿತ್ತು.
ಸೆಮಿನಾರ್‌ ಕಾರ್ಯಕ್ರಮದಲ್ಲಿ ಟೊಯೋಟಾ ಕಿಲೋಸ್ಕರ್ ಮೋಟಾರ್ ಲಿಮಿಟೆಡ್ ನಿವೃತ್ತ ಇ ಹೆಚ್ ಎಸ್ ವಿಭಾಗದ ಮುಖ್ಯಸ್ಥರು, ರಾಷ್ಟೀಯ ಸುರಕ್ಷತಾ ಸಂಸ್ಥೆ ಕರ್ನಾಟಕ ಪ್ರಾಂತ್ಯದ ಸದಸ್ಯರಾದ ಶ್ರೀ ರಾಮಮೂರ್ತಿಯವರು, Safety Culture & Effective Leadership ಈ ವಿಷಯವಾಗಿ ಉಪನ್ಯಾಸ ನೀಡಿದರು. ನಂತರ ಡಾ.ಮಲ್ಲಿಕಾರ್ಜುನ ಗೌಡರು Today’s challenge in creating behavioral changes among workers to ensure safety ಈ ವಿಷಯವಾಗಿ ಚರ್ಚಿಸಿದರು. ದಾರವಾಡದ ಉಪನ್ಯಾಸಕರು ಮತ್ತು ಚಾರ್ಟಡ್ ಇಂಜಿನಿಯರಿಂಗ್ ಶ್ರೀ ವಿಠಲ ಹನುಮಂತರಾವ್ ಜಾದವ್
Stability certification of industrial buildings and structures ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿದರು. ಈ ಕಾರ್ಯಕ್ರಮದಲ್ಲಿ ಬಳ್ಳಾರಿ, ವಿಜಯನಗರ, ರಾಯಚೂರು, ಗದಗ್ ಮತ್ತು ಕೊಪ್ಪಳ ಜಿಲ್ಲೆಯ ವಿವಿಧ ಕಾರ್ಖಾನೆಗಳಿಂದ ಉದ್ಯೋಗಿಗಳು ಮತ್ತು ಸುರಕ್ಷತಾ ವಿಭಾಗದ ಅಧಿಕಾರಿಗಳು ಹಾಜರಾಗಿ ಪ್ರಯೋಜನವನ್ನು ಪಡೆದರು.

ಕಾರ್ಯಕ್ರಮವು ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗಿ ಸಂಜೆ 6 ಗಂಟೆಗೆ ಮುಕ್ತಾಯವಾಯಿತು.ಪ್ರಾರಂಭದಲ್ಲಿ ಉದ್ಘಾಟನೆಯನ್ನು ಕಿರ್ಲೋಸ್ಕರ್ ಕಾರ್ಖಾನೆಯ ಪ್ಲಾಂಟ್ ಹೆಡ್ ಶ್ರೀ ರಮೇಶ್ , ಮಾನವ ಸಂಪನ್ಮೂಲ ಮತ್ತು ಸಾಮಾನ್ಯ ಆಡಳಿತ ವಿಭಾಗದ ಎಕ್ಸಿಕ್ಯೂಟಿವ್ ವೈಸ್ ಪ್ರೆಸಿಡೆಂಟ್ ಪಿ. ನಾರಾಯಣ ,ಬೀಡು ಕಬ್ಬಿಣ ವಿಭಾಗದ ಎಕ್ಸಿಕ್ಯೂಟಿವ್ ವೈಸ್ ಪ್ರೆಸಿಡೆಂಟ್ ಎಂಜಿ ನಾಗರಾಜ್, ಹುಬ್ಬಳ್ಳಿ ವಲಯದ ಕಾರ್ಖಾನೆಗಳ ಜಂಟಿ ನಿರ್ದೇಶಕರಾದಂತಹ ಶ್ರೀ ರವೀಂದ್ರನಾಥ ಎನ್ ರಾಥೋಡ್, ಬಳ್ಳಾರಿ ವಿಭಾಗದ ಹಿರಿಯ ಸಹಾಯಕ ನಿರ್ದೇಶಕರಾದ ಶ್ರೀ ವರುಣ್ , ಕೊಪ್ಪಳ ಮತ್ತು ರಾಯಚೂರು ವಿಭಾಗದ ಸಹಾಯಕ ನಿರ್ದೇಶಕರಾದ ಶ್ರೀ ವಿಜಯಕುಮಾರ್ ಹಾಗೂ ಉಪನ್ಯಾಸಕರು ಸೇರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಭಾಗವಹಿಸಿದಂತಹ ಉದ್ಯೋಗಗಳು ಉತ್ತಮವಾದ ಪ್ರತಿಕ್ರಿಯೆಯನ್ನು ನೀಡುವುದರ ಮೂಲಕ ಮುಂಬರುವ ದಿನಗಳಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿ ಸುರಕ್ಷತೆಯನ್ನು ಇನ್ನೂ ಹೆಚ್ಚಿನ ಎತ್ತರಕ್ಕೆ ಬೆಳೆಸಿಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಸೆಮಿನಾರ್ ಕೊನೆಯಲ್ಲಿ ಭಾಗವಹಿಸಿದ ಎಲ್ಲಾರಿಗೂ ಸರ್ಟಿಫಿಕೇಟ್ ನೀಡಲಾಯಿತು. ಎಲ್ಲಾ ಕಾರ್ಖಾನೆಗಳ ಆಡಳಿತ ಮಂಡಳಿಗೆ ಕಿರ್ಲೋಸ್ಕರ್ ಮತ್ತು ಬಿ ಕೆ ರೈಸ್ ವತಿಯಿಂದ ಧನ್ಯವಾದವನ್ನು ಅರ್ಪಿಸಲಾಯಿತು.

ಕೊನೆಯದಾಗಿ ಈ ಕಾರ್ಯಕ್ರಮ ಯಶಸ್ಸಿನ ಹಿಂದೆ ಶ್ರಮವಹಿಸಿ ಈ ಕಾರ್ಯಕ್ರಮದ ಆತಿಥ್ಯತೆ ವಹಿಸಿಕೊಂಡಿದ್ದ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಆಡಳಿತ ಮಂಡಳಿಗೆ ಮತ್ತು ಸುರಕ್ಷತಾ ವಿಭಾಗದ ಅಧಿಕಾರಿಗಳಿಗೆ ಮತ್ತು ಎಸ್ ಎಲ್ ಆರ್ ಕಾರ್ಖಾನೆಯ ಸುರಕ್ಷತಾ ವಿಭಾಗದ ಅಧಿಕಾರಿಗಳಿಗೆ ಅಭಿನಂದನೆಯನ್ನು ಕಾರ್ಖಾನೆಗಳು, ಬಾಯ್ಲರ್ ಗಳ ಸ್ವಾಸ್ಥ್ಯ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀ ರವೀಂದ್ರನಾಥ್ ಎನ್ ರಾಥೋಡ್ ತಿಳಿಸಿದರು. ಕಾರ್ಯಕ್ರಮ ಗ್ರೂಪ್ ಫೋಟೋ ಮೂಲಕ ಮುಕ್ತಾಯವಾಯಿತು.

ಮುರುಳೀಧರ್ ಎಂ ನಾಡಿಗೇರ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...