Monday, December 15, 2025
Monday, December 15, 2025

ಕೃಷಿ ಗಣತಿಯನ್ನು ಡಿ. 31 ರೊಳಗೆ ಪೂರೈಸಿ- ಡಾ.ಸೆಲ್ವಮಣಿ

Date:

ಇದೇ ಪ್ರಥಮ ಬಾರಿಗೆ ಮೊಬೈಲ್ ಆ್ಯಪ್ ಮೂಲಕ ಕೈಗೊಳ್ಳಲಾಗುತ್ತಿರುವ 11ನೇ ಕೃಷಿ ಗಣತಿ ಕಾರ್ಯವನ್ನು ಡಿಸೆಂಬರ್ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು.

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೃಷಿ ಗಣತಿ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದರು.

ಕೃಷಿ ಗಣತಿ ಕಾರ್ಯಕ್ಕೆ ಗ್ರಾಮಲೆಕ್ಕಾಧಿಕಾರಿಗಳು ಮೂಲ ಕ್ಷೇತ್ರ ಕಾರ್ಯಕರ್ತರಾಗಿದ್ದು, ಕಂದಾಯ ನಿರೀಕ್ಷಕರನ್ನು ಮೇಲ್ವಿಚಾರಕರಾಗಿ ನೇಮಕ ಮಾಡಲಾಗಿದೆ. ಇವರು ಗಣತಿ ಕಾರ್ಯವನ್ನು ನಿಖರವಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಮಹೇಶ್ವರಪ್ಪ ಅವರು ಮಾತನಾಡಿ, ದೇಶದಲ್ಲಿ ಕೃಷಿಗೆ ಸಂಬಂಧಿಸಿದ ಬಹುತೇಕ ಮಾಹಿತಿಯನ್ನು ಕೃಷಿ ಗಣತಿಯಿಂದಲೆ ಸಂಗ್ರಹಿಸಲಾಗುತ್ತದೆ. ಪ್ರತಿ 5 ವರ್ಷಗಳಿಗೊಮ್ಮೆ ಕೇಂದ್ರ ಸರ್ಕಾರವು ದೇಶಾದ್ಯಂತ ಕೃಷಿ ಗಣತಿಯನ್ನು ಕೈಗೊಳ್ಳುತ್ತದೆ. ಕೃಷಿಗಣತಿಯಿಂದ ರಾಜ್ಯದಲ್ಲಿ ಮತ್ತು ರಾಷ್ಟ್ರದಲ್ಲಿ ವಿವಿಧ ಹಿಡುವಳಿದಾರರ ಪ್ರಮಾಣ ತಿಳಿದುಬರುತ್ತದೆ. ಇದು 3 ಹಂತಗಳಲ್ಲಿ ನಡೆಯುತ್ತದೆ.

ಮೊದಲನೇ ಹಂತದಲ್ಲಿ ಕೃಷಿ ಗಣತಿಯ ಮೂಲಕ ಗ್ರಾಮವಾರು ಹಿಡುವಳಿದಾರರ ಮಾಹಿತಿ, ವಿವಿಧ ಸಾಮಾಜಿಕ ಗುಂಪುವಾರು, ಲಿಂಗವಾರು, ಹಿಡುವಳಿ ವರ್ಗಗಳವಾರು ಮಾಹಿತಿ ಧಾಖಲಿಸಲಾಗುತ್ತದೆ. ಎರಡನೇ ಹಂತದಲ್ಲಿ ಸಕಾಲಿಕ ಗ್ರಾಮಗಳಲ್ಲಿ ಹಿಡುವಳಿದಾರರ ಬೆಳೆವಾರು, ನೀರಾವರಿ ಮೂಲವಾರು ಅಂಕಿ-ಅಂಶಗಳನ್ನು ದಾಖಲಿಸಲಾಗುತ್ತದೆ. ಮೂರನೇ ಹಂತದಲ್ಲಿ ಇನ್ ಪುಟ್ ಸಮೀಕ್ಷೆಯನ್ನು ಆಯ್ದ ಹಿಡುವಳಿದಾರರು ಬಳಸುವ ಕೃಷಿ ಉಪಕರಣ/ಕೃಷಿ ಪರಿಕರಗಳು,ಉಪಯೋಗಿಸಿದ ಗೊಬ್ಬರ, ಜಾನುವಾರು, ಕೃಷಿ ಸಾಲ, ಹಿಡುವಳಿದಾರರ ವಿದ್ಯಾಭ್ಯಾಸ ಮಟ್ಟ, ಇತ್ಯಾದಿಗಳನ್ನು ಸಂಗ್ರಹಿಸಲಾಗುತ್ತದೆ ಎಂದು ಹೇಳಿದರು.

ಬೆಳೆ ಕಟಾವು ಸಮೀಕ್ಷೆ ಕಾರ್ಯದ ಪ್ರಗತಿಯನ್ನು ತಾಲೂಕು ಮಟ್ಟದಲ್ಲಿ ಪರಿಶೀಲಿಸಬೇಕು. ಅಸಮರ್ಪಕ ಸಮೀಕ್ಷೆಯಿಂದ ರೈತರಿಗೆ ನಷ್ಟ ಉಂಟಾದರೆ ಸಂಬಂಧಪಟ್ಟವರು ಜವಾಬ್ದಾರರಾಗಿರುತ್ತಾರೆ. ಸಮೀಕ್ಷೆ ಕಾರ್ಯಕ್ಕೆ ಯಾವುದೇ ಸಬೂಬು ಹೇಳದೆ ಆದಷ್ಟು ಬೇಗನೆ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಜನನ ಮತ್ತು ಮರಣ ನೋಂದಣಿ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ತರಬೇಕು. ಸಕಾಲದಲ್ಲಿ ಜನನ ಮತ್ತು ಮರಣ ಪ್ರಮಾಣ ಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು. ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಯಾವುದೇ ಲೋಪ ಕಂಡು ಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಜನನ-ಮರಣ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ನೋಂದಣಿಯನ್ನು ತ್ವರಿತವಾಗಿ ಮಾಡಲು ಅನುಕೂಲವಾಗುವಂತೆ ನೋಂದಣಧಿಕಾರಿಗೆ ಮಾಹಿತಿಯನ್ನು ಸಕಾಲದಲ್ಲಿ ಒದಗಿಸಲು ಅಂಗನವಾಡಿ, ಆಶಾ ಕಾರ್ಯಕರ್ತರು, ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳು, ಎ.ಎನ್.ಎಂ, ಪಿಡಿಒ, ನಗರ ಸಭೆ/ಪುರಸಭೆ ವಾರ್ಡಗಳ ಕಂದಾಯ ಸಿಬ್ಬಂದಿ, ಆರೋಗ್ಯ ಸಿಬ್ಬಂದಿಗಳನ್ನು ಒಳಗೊಂಡ ವಾಟ್ಸಾಪ್ ಗ್ರೂಪ್ ಗಳನ್ನು ರಚಿಸುವಂತೆ ಅವರು ತಿಳಿಸಿದರು.

ನಗರದ ಕೆಲವು ಆಸ್ಪತ್ರೆಗಳು ಮರಣ ಕಾರಣ ಪ್ರಮಾಣ ಪತ್ರವನ್ನು ಇ-ಜನ್ಮ ತಂತ್ರಾಂಶದಲ್ಲಿ ಸಮರ್ಪಕವಾಗಿ ಅಪ್ ಲೋಡ್ ಮಾಡದಿರುವ ಬಗ್ಗೆ ದೂರುಗಳು ಬಂದಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಅವರಿಗೆ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...