Monday, December 15, 2025
Monday, December 15, 2025

ಪ್ರೊ ಕಬಡ್ಡಿ ಟೂರ್ನಿ ಬುಲ್ಸ್ ವಿರುದ್ಧ ವಾರಿಯರ್ಸ್ ವಿಜಯ

Date:

ಪಂದ್ಯದ ಆರಂಭದಲ್ಲಿ ಉತ್ತಮವಾಗಿ ಆಡಿದ ಬೆಂಗಳೂರು ಬುಲ್ಸ್‌ ತಂಡವನ್ನು ಬೆಂಗಾಲ್ ವಾರಿಯರ್ಸ್ ತಂಡವು ಕೊನೆಗೂ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು.

ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪ್ರೊ ಕಬಡ್ಡಿ ಲೀಗ್ ಟೂರ್ನಿಯಲ್ಲಿ ಬುಲ್ಸ್ ತಂಡದ ಹ್ಯಾಟ್ರಿಕ್ ಜಯದ ಕನಸು ಕೈಗೂಡಲಿಲ್ಲ.

ಬೆಂಗಾಲ್ ತಂಡವು 42-33ರಿಂದ ಗೆದ್ದಿತು. ಬೆಂಗಳೂರು ತಂಡವು ಮೊದಲೆರಡು ಪಂದ್ಯಗಳಲ್ಲಿ ಜಯಿಸಿತ್ತು.

ತವರಿನ ಪ್ರೇಕ್ಷಕರ ಮುಂದೆ ಮೊದಲಾರ್ಧದದಲ್ಲಿಯೇ 14-15ರಿಂದ ಬೆಂಗಳೂರು ತಂಡವು ಹಿನ್ನಡೆ ಅನುಭವಿಸಿತ್ತು. ವಿರಾಮದ ನಂತರ ಬೆಂಗಳೂರು ತಂಡವು ತಿರುಗೇಟು ನೀಡುವ ನಿರೀಕ್ಷೆಯಲ್ಲಿದ್ದ ಪ್ರೇಕ್ಷಕರಿಗೆ ನಿರಾಶೆಯಾಯಿತು. ತಂಡದ ಭರತ್‌ (8) ಹಾಗೂ ವಿಕಾಶ್ ಖಂಡೋಲಾ (7) ಉತ್ತಮವಾಗಿ ಆಡಿದರು.

ಆದರೆ ಬೆಂಗಾಲ್ ತಂಡಕ್ಕೆ ನಾಯಕ ಮಣಿಂದರ್‌ ಸಿಂಗ್‌ (11) ಸೂಪರ್‌ ಟೆನ್‌ ರೇಡ್‌ಗಳ ಬಲದಿಂದ ಜಯ ಒಲಿಯಿತು. ತಂಡವು ಮೂರು ಪಂದ್ಯಗಳಲ್ಲಿ ಎರಡು ಜಯ ಹಾಗೂ ಒಂದರಲ್ಲಿ ಡ್ರಾ ಸಾಧಿಸಿದೆ. ಶ್ರೀಕಾಂತ್‌ ಜಾಧವ್‌ (6) ಹಾಗೂ ಗಿರೀಶ್‌ ಮಾರುತಿ (5) ಆಲ್‌ರೌಂಡ್ ಆಟವಾಡಿದರು.

ಆದರೆ ಬೆಂಗಾಲ್ ತಂಡದ ಪ್ರಮುಖ ಆಟಗಾರ ದೀಪಕ್‌ ಹೂಡಾ 10 ಬಾರಿ ದಾಳಿಗೆ ತೆರಳಿದರೂ ಒಂದು ಅಂಕ ಮಾತ್ರ ಗಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...