Sunday, December 14, 2025
Sunday, December 14, 2025

ಕೈಗಾದ ಘಟಕ ವಿಸ್ತರಣೆಗೆ ಹಸಿರು ನ್ಯಾಯ ಮಂಡಳಿ ಬ್ರೇಕ್

Date:

ಕೈಗಾ ಅಣು ವಿದ್ಯುತ್‌ ಸ್ಥಾವರದ ವಿಸ್ತರಣೆಗೆ ನ್ಯೂಕ್ಲಿಯರ್‌ ಪವರ್‌ ಕಾರ್ಪೋರೇಷನ್‌ ಆಫ್ ಇಂಡಿಯಾ ಗೆ ನೀಡಲಾಗಿದ್ದ ಅನುಮತಿಯನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ತಡೆ ಹಿಡಿದಿದೆ.

ಕೈಗಾದ ಘಟಕ 5 ಮತ್ತು 6ನ್ನು ವಿಸ್ತರಣೆ ಮಾಡಲು ನೀಡಿರುವಂತಹ ಜಾಗವು ಪಶ್ಚಿಮ ಘಟ್ಟದ ಸೂಕ್ಷ್ಮ ವಲಯದಲ್ಲಿ ಬರುತ್ತದೆ.

ಈ ವಿಸ್ತರಣೆಯಿಂದಾಗಿ ಅಲ್ಲಿನ ಜೀವವೈವಿಧ್ಯತೆಗೆ ತೊಂದರೆಯಾಗಲಿದೆ ಎಂದು ಕೈಗಾ ಅಣು ವಿದ್ಯುತ್‌ ಸ್ಥಾವರ ಮತ್ತು ಘಟಕ ವಿರೋಧಿ ಹೋರಾಟ ಸಮಿತಿಯು ಎನ್‌ಜಿಟಿಗೆ ಅರ್ಜಿ ಸಲ್ಲಿಸಿತ್ತು. ಆ ಅರ್ಜಿ ವಿಚಾರಣೆ ಮಾಡಿರುವ ನ್ಯಾಯಮೂರ್ತಿ ಕೆ.ರಾಮಕೃಷ್ಣನ್‌ ಮತ್ತು ಸತ್ಯಗೋಪಾಲ್‌ ಕೊರ್ಲಪಾರ್ಟಿ ಅವರನ್ನೊಳಗೊಂಡ ಎನ್‌ಜಿಟಿ ಪೀಠವು ಅನುಮತಿಯನ್ನು ತಡೆಹಿಡಿದಿದೆ.

ಎನ್‌ಪಿಸಿಐಎಲ್‌ ಮತ್ತೆ ಅನುಮತಿ ಸಿಗುವವರೆಗೆ ಯಾವುದೇ ರೀತಿಯಲ್ಲಿ ವಿಸ್ತರಣೆಯ ಕಾರ್ಯಾರಂಭ ಮಾಡುವಂತಿಲ್ಲ. ಹಾಗಿದ್ದರೂ, ಪರಿಸರ ಮತ್ತು ಅರಣ್ಯ ಸಚಿವಾಲಯ ಹೊರಡಿಸುವ ನಿರ್ದೇಶನಗಳಿಗೆ ಒಳಪಟ್ಟು ನಿರ್ಮಾಣ ಕಾರ್ಯವನ್ನು ಮಾಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೈಗಾದ 5 ಮತ್ತು 6ನೇ ಘಟಕ ಪಶ್ಚಿಮ ಘಟ್ಟದ ಸೂಕ್ಷ್ಮ ವಲಯದಲ್ಲಿ ಬರುತ್ತದೆಯೇ ಎನ್ನುವುದನ್ನು ಪರಿಶೀಲನೆ ಮಾಡಬೇಕು. ಹಾಗೆಯೇ ಈ ಯೋಜನೆಯಿಂದ ಕೈಗಾ ಗ್ರಾಮದ ಮೇಲೆ ಯಾವ ರೀತಿಯಲ್ಲಿ ಪರಿಣಾಮ ಬೀರಲಿದೆ ಎನ್ನುವುದನ್ನೂ ಪರಿಶೀಲನೆ ಮಾಡಿ ಎಂದು ಪರಿಸರ ಮತ್ತು ಅರಣ್ಯ ಇಲಾಖೆಗೆ ಸೂಚಿಸಲಾಗಿದೆ.

ಈ ಸಮಸ್ಯೆಯನ್ನು ಬಗೆಹರಿಸಲು ತೆಗೆದುಕೊಳ್ಳಬಹುದಾದಂತಹ ಕ್ರಮ, ಅಲ್ಲಿನ ನೀರಿನ ಲಭ್ಯತೆ, ಸೂಕ್ಷ್ಮ ವಲಯದ ಮೇಲೆ ಯೋಜನೆಯಿಂದಾಗಬಹುದಾದ ಪರಿಣಾಮ, ಅಲ್ಲಿನ ನೀರಿನ ಮೂಲಗಳ ಮೇಲಾಗಬಹುದಾದ ಪರಿಣಾಮ, ಘಟಕಗಳಲ್ಲಿ ಅಣು ವಿಕಿರಣದಿಂದಾಗಿ ಸ್ಥಳೀಯ ಜನರ ಆರೋಗ್ಯದ ಮೇಲೆ ಉಂಟಾಗಬಹುದಾದ ಪರಿಣಾಮದ ಮೇಲೆ ಅಧ್ಯಯನ ನಡೆಸಿ, ವರದಿ ಸಲ್ಲಿಸುವಂತೆ ಎನ್‌ಪಿಸಿಐಎಲ್‌ಗೆ ಸೂಚಿಸಲಾಗಿದೆ.

ಕೈಗಾ ಅಣು ಸ್ಥಾವರದ ಘಟಕ 5 ಮತ್ತು 6 ಅನ್ನು 235 ಮೆಗಾವ್ಯಾಟ್‌ನಿಂದ 700ಮೆಗಾವ್ಯಾಟ್‌ಗೆ ವಿಸ್ತರಿಸಲು 2019ರಲ್ಲಿ ಅನುಮತಿ ನೀಡಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...