Wednesday, October 2, 2024
Wednesday, October 2, 2024

ಕೈಗಾದ ಘಟಕ ವಿಸ್ತರಣೆಗೆ ಹಸಿರು ನ್ಯಾಯ ಮಂಡಳಿ ಬ್ರೇಕ್

Date:

ಕೈಗಾ ಅಣು ವಿದ್ಯುತ್‌ ಸ್ಥಾವರದ ವಿಸ್ತರಣೆಗೆ ನ್ಯೂಕ್ಲಿಯರ್‌ ಪವರ್‌ ಕಾರ್ಪೋರೇಷನ್‌ ಆಫ್ ಇಂಡಿಯಾ ಗೆ ನೀಡಲಾಗಿದ್ದ ಅನುಮತಿಯನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ತಡೆ ಹಿಡಿದಿದೆ.

ಕೈಗಾದ ಘಟಕ 5 ಮತ್ತು 6ನ್ನು ವಿಸ್ತರಣೆ ಮಾಡಲು ನೀಡಿರುವಂತಹ ಜಾಗವು ಪಶ್ಚಿಮ ಘಟ್ಟದ ಸೂಕ್ಷ್ಮ ವಲಯದಲ್ಲಿ ಬರುತ್ತದೆ.

ಈ ವಿಸ್ತರಣೆಯಿಂದಾಗಿ ಅಲ್ಲಿನ ಜೀವವೈವಿಧ್ಯತೆಗೆ ತೊಂದರೆಯಾಗಲಿದೆ ಎಂದು ಕೈಗಾ ಅಣು ವಿದ್ಯುತ್‌ ಸ್ಥಾವರ ಮತ್ತು ಘಟಕ ವಿರೋಧಿ ಹೋರಾಟ ಸಮಿತಿಯು ಎನ್‌ಜಿಟಿಗೆ ಅರ್ಜಿ ಸಲ್ಲಿಸಿತ್ತು. ಆ ಅರ್ಜಿ ವಿಚಾರಣೆ ಮಾಡಿರುವ ನ್ಯಾಯಮೂರ್ತಿ ಕೆ.ರಾಮಕೃಷ್ಣನ್‌ ಮತ್ತು ಸತ್ಯಗೋಪಾಲ್‌ ಕೊರ್ಲಪಾರ್ಟಿ ಅವರನ್ನೊಳಗೊಂಡ ಎನ್‌ಜಿಟಿ ಪೀಠವು ಅನುಮತಿಯನ್ನು ತಡೆಹಿಡಿದಿದೆ.

ಎನ್‌ಪಿಸಿಐಎಲ್‌ ಮತ್ತೆ ಅನುಮತಿ ಸಿಗುವವರೆಗೆ ಯಾವುದೇ ರೀತಿಯಲ್ಲಿ ವಿಸ್ತರಣೆಯ ಕಾರ್ಯಾರಂಭ ಮಾಡುವಂತಿಲ್ಲ. ಹಾಗಿದ್ದರೂ, ಪರಿಸರ ಮತ್ತು ಅರಣ್ಯ ಸಚಿವಾಲಯ ಹೊರಡಿಸುವ ನಿರ್ದೇಶನಗಳಿಗೆ ಒಳಪಟ್ಟು ನಿರ್ಮಾಣ ಕಾರ್ಯವನ್ನು ಮಾಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೈಗಾದ 5 ಮತ್ತು 6ನೇ ಘಟಕ ಪಶ್ಚಿಮ ಘಟ್ಟದ ಸೂಕ್ಷ್ಮ ವಲಯದಲ್ಲಿ ಬರುತ್ತದೆಯೇ ಎನ್ನುವುದನ್ನು ಪರಿಶೀಲನೆ ಮಾಡಬೇಕು. ಹಾಗೆಯೇ ಈ ಯೋಜನೆಯಿಂದ ಕೈಗಾ ಗ್ರಾಮದ ಮೇಲೆ ಯಾವ ರೀತಿಯಲ್ಲಿ ಪರಿಣಾಮ ಬೀರಲಿದೆ ಎನ್ನುವುದನ್ನೂ ಪರಿಶೀಲನೆ ಮಾಡಿ ಎಂದು ಪರಿಸರ ಮತ್ತು ಅರಣ್ಯ ಇಲಾಖೆಗೆ ಸೂಚಿಸಲಾಗಿದೆ.

ಈ ಸಮಸ್ಯೆಯನ್ನು ಬಗೆಹರಿಸಲು ತೆಗೆದುಕೊಳ್ಳಬಹುದಾದಂತಹ ಕ್ರಮ, ಅಲ್ಲಿನ ನೀರಿನ ಲಭ್ಯತೆ, ಸೂಕ್ಷ್ಮ ವಲಯದ ಮೇಲೆ ಯೋಜನೆಯಿಂದಾಗಬಹುದಾದ ಪರಿಣಾಮ, ಅಲ್ಲಿನ ನೀರಿನ ಮೂಲಗಳ ಮೇಲಾಗಬಹುದಾದ ಪರಿಣಾಮ, ಘಟಕಗಳಲ್ಲಿ ಅಣು ವಿಕಿರಣದಿಂದಾಗಿ ಸ್ಥಳೀಯ ಜನರ ಆರೋಗ್ಯದ ಮೇಲೆ ಉಂಟಾಗಬಹುದಾದ ಪರಿಣಾಮದ ಮೇಲೆ ಅಧ್ಯಯನ ನಡೆಸಿ, ವರದಿ ಸಲ್ಲಿಸುವಂತೆ ಎನ್‌ಪಿಸಿಐಎಲ್‌ಗೆ ಸೂಚಿಸಲಾಗಿದೆ.

ಕೈಗಾ ಅಣು ಸ್ಥಾವರದ ಘಟಕ 5 ಮತ್ತು 6 ಅನ್ನು 235 ಮೆಗಾವ್ಯಾಟ್‌ನಿಂದ 700ಮೆಗಾವ್ಯಾಟ್‌ಗೆ ವಿಸ್ತರಿಸಲು 2019ರಲ್ಲಿ ಅನುಮತಿ ನೀಡಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Youth Empowerment and Sports ಸುತ್ತಮುತ್ತಲ ಪ್ರದೇಶದ ಸ್ಬಚ್ಛತೆ ನಮ್ಮ ಜವಾಬ್ದಾರಿ- ಶಾಸಕ ಚನ್ನಬಸಪ್ಪ

 Youth Empowerment and Sports ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು...

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...