Thursday, August 13, 2026
Thursday, August 13, 2026

ಪತ್ರಕರ್ತರ ಮಾಸಾಶನ ಆಯ್ಕೆ ಸಮಿತಿಗೆ ಪತ್ರಕರ್ತ ಮಂಜುನಾಥ್ ನೇಮಕ

Date:

ಕರ್ನಾಟಕ ಸರ್ಕಾರವು ಸಂಕಷ್ಟದಲ್ಲಿರುವ ಪತ್ರಕರ್ತರ ಮಾಸಾಶನ ನೀಡಲು ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡಲು ರಚಿಸಿರುವ ನೂತನ ಮಾಸಾಶನ ಸಮಿತಿಗೆ ಹಿರಿಯ ಪತ್ರಕರ್ತ, ಶಿವಮೊಗ್ಗ ಟ್ರಸ್ಟ್ ಪ್ರೆಸ್ ಅಧ್ಯಕ್ಷ, ಕ್ರಾಂತಿ ದೀಪ ಸಂಪಾದಕರಾದ ಎನ್. ಮಂಜುನಾಥ್ ಅವರನ್ನು ಸದಸ್ಯರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯದರ್ಶಿ ಹೊರಡಿಸಿರುವ ಆದೇಶದಲ್ಲಿ ಪುನರ್ ರಚಿತ ಸಮಿತಿಯನ್ನು ಪ್ರಕಟಿಸಲಾಗಿದೆ. ಸಮಿತಿಯ ಅವಧಿಯನ್ನು ಎರಡು ವರ್ಷ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ಚಾಲ್ತಿಯಲ್ಲಿರಲಿದೆ.

ವಾರ್ತಾ ಇಲಾಖೆ ಆಯುಕ್ತರು ಅಥವಾ ನಿರ್ದೇಶಕರು ಅಧ್ಯಕ್ಷರಾಗಿರುವ ಸಮಿತಿಯಲ್ಲಿ ಸದಸ್ಯರಾಗಿ ಕನ್ನಡಪ್ರಭ ಸಂಪಾದಕ ರವಿ ಹೆಗಡೆ, ಕ್ರಾಂತಿದೀಪ ಸಂಪಾದಕ ಎನ್. ಮಂಜುನಾಥ್, ವಿಶ್ರಾಂತ ಪತ್ರಕರ್ತೆ ಗಾಯತ್ರಿ ಶ್ರೀನಿವಾಸ್, ಟಿವಿ 18 ವಾಹಿನಿಯ ಸ್ಥಾನಿಕ ಸಂಪಾದಕ ಸಿದ್ದು ಕಾಳೋಜಿ, ಹಿರಿಯ ಪತ್ರಕರ್ತ ಎಂ.ಎಸ್. ರಾಜೇಂದ್ರ ಕುಮಾರ್ ಇನ್ನು ಮುಂತಾದವು ನೂತನ ಸಮಿತಿಯ ಸದಸ್ಯರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...