Monday, February 2, 2026
Monday, February 2, 2026

ಐದು ರೂಪಾಯಿ ಡಾಕ್ಟರ್ ಶಂಕರೇಗೌಡರಿಗೆ ಇಂಡಿಯನ್ ಆಫ್ ದ ಇಯರ್ ಪ್ರಶಸ್ತಿ

Date:

ರಾಜ್ಯದಲ್ಲಿ ಕೇವಲ 5 ರೂಪಾಯಿಯಲ್ಲಿ ವೈದ್ಯಕೀಯ ಚಿಕಿತ್ಸೆ ನೀಡುವ ಮುಖಾಂತರ ಸಾಧನೆಗೈದ ಮಂಡ್ಯದ ವೈದ್ಯ ಶ್ರೀ ಶಂಕರೇಗೌಡರಿಗೆ. ಸಾಮಾಜಿಕ ಬದಲಾವಣೆ ವಿಭಾಗದಲ್ಲಿ ಇಂಡಿಯನ್‌ ಆಫ್‌ ದಿ ಇಯರ್‌ 2022 ಖಾಸಗಿ ಸಂಸ್ಥೆಯೊಂದು ಗುರುತಿಸಿ ಗೌರವ ಸಲ್ಲಿಸಿದ್ದಾರೆ.

ನಾನು 1982ರಿಂದ 5 ರೂಪಾಯಿಯಲ್ಲಿ ಚಿಕಿತ್ಸೆ ನೀಡುತ್ತ ಬಂದಿದ್ದೇನೆ. ನಮ್ಮಲ್ಲಿ ಯಾವ ಜ್ಞಾನವಿದೆಯೋ ಅದನ್ನು ಎಲ್ಲರಿಗೂ ಸಮಾಜವಾಗಿ ನೀಡಬೇಕು. ಹಾಗಾಗಿ ನನ್ನ ಜ್ಞಾನವನ್ನು ನನ್ನ ಶಿಕ್ಷಣಕ್ಕೆ ಕಾರಣರಾದ ಜನರಿಗೆ ನೀಡಬೇಕು ಎಂಬ ಉದ್ದೇಶದಿಂದ ಪದವಿ ಪಡೆದ ಬಳಿಕ ಈ ವೃತ್ತಿ ಪ್ರಾರಂಭಿಸಿದ್ದೇನೆ ಎಂದು ಪ್ರಶಸ್ತಿ ಸ್ವೀಕರಿಸಿದ ಬಳಿ ಮಾತನಾಡಿದ್ದಾರೆ.

ಈ ಕಾರ್ಯಕ್ರಮವೂ ನವದೆಹಲಿಯಲ್ಲಿ ಆಯೋಜಿಸಿದೆ. ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವಿಟ್ಟರ್‌ನಲ್ಲಿ ಟ್ವೀಟ್‌ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

5 ರೂಪಾಯಿ ಡಾಕ್ಟರ್ ಎಂದೇ ಪ್ರಖ್ಯಾತಿಗಳಿಸಿರುವ ಮಂಡ್ಯದ ವೈದ್ಯ ಶ್ರೀ ಶಂಕರೇಗೌಡರಿಗೆ ಇಂಡಿಯನ್‌ ಆಫ್‌ ದಿ ಇಯರ್‌ ಪ್ರಶಸ್ತಿ ಲಭಿಸಿರುವುದು ಅತ್ಯಂತ ಅಭಿನಂದನಾರ್ಹ ಸಂಗತಿಯಾಗಿದೆ. ಗ್ರಾಮೀಣ ಭಾಗದ ಜನರ ಸೇವೆಗಾಗಿಯೇ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಟ್ವೀಟ್‌ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...