Sunday, December 14, 2025
Sunday, December 14, 2025

ಐದು ರೂಪಾಯಿ ಡಾಕ್ಟರ್ ಶಂಕರೇಗೌಡರಿಗೆ ಇಂಡಿಯನ್ ಆಫ್ ದ ಇಯರ್ ಪ್ರಶಸ್ತಿ

Date:

ರಾಜ್ಯದಲ್ಲಿ ಕೇವಲ 5 ರೂಪಾಯಿಯಲ್ಲಿ ವೈದ್ಯಕೀಯ ಚಿಕಿತ್ಸೆ ನೀಡುವ ಮುಖಾಂತರ ಸಾಧನೆಗೈದ ಮಂಡ್ಯದ ವೈದ್ಯ ಶ್ರೀ ಶಂಕರೇಗೌಡರಿಗೆ. ಸಾಮಾಜಿಕ ಬದಲಾವಣೆ ವಿಭಾಗದಲ್ಲಿ ಇಂಡಿಯನ್‌ ಆಫ್‌ ದಿ ಇಯರ್‌ 2022 ಖಾಸಗಿ ಸಂಸ್ಥೆಯೊಂದು ಗುರುತಿಸಿ ಗೌರವ ಸಲ್ಲಿಸಿದ್ದಾರೆ.

ನಾನು 1982ರಿಂದ 5 ರೂಪಾಯಿಯಲ್ಲಿ ಚಿಕಿತ್ಸೆ ನೀಡುತ್ತ ಬಂದಿದ್ದೇನೆ. ನಮ್ಮಲ್ಲಿ ಯಾವ ಜ್ಞಾನವಿದೆಯೋ ಅದನ್ನು ಎಲ್ಲರಿಗೂ ಸಮಾಜವಾಗಿ ನೀಡಬೇಕು. ಹಾಗಾಗಿ ನನ್ನ ಜ್ಞಾನವನ್ನು ನನ್ನ ಶಿಕ್ಷಣಕ್ಕೆ ಕಾರಣರಾದ ಜನರಿಗೆ ನೀಡಬೇಕು ಎಂಬ ಉದ್ದೇಶದಿಂದ ಪದವಿ ಪಡೆದ ಬಳಿಕ ಈ ವೃತ್ತಿ ಪ್ರಾರಂಭಿಸಿದ್ದೇನೆ ಎಂದು ಪ್ರಶಸ್ತಿ ಸ್ವೀಕರಿಸಿದ ಬಳಿ ಮಾತನಾಡಿದ್ದಾರೆ.

ಈ ಕಾರ್ಯಕ್ರಮವೂ ನವದೆಹಲಿಯಲ್ಲಿ ಆಯೋಜಿಸಿದೆ. ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವಿಟ್ಟರ್‌ನಲ್ಲಿ ಟ್ವೀಟ್‌ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

5 ರೂಪಾಯಿ ಡಾಕ್ಟರ್ ಎಂದೇ ಪ್ರಖ್ಯಾತಿಗಳಿಸಿರುವ ಮಂಡ್ಯದ ವೈದ್ಯ ಶ್ರೀ ಶಂಕರೇಗೌಡರಿಗೆ ಇಂಡಿಯನ್‌ ಆಫ್‌ ದಿ ಇಯರ್‌ ಪ್ರಶಸ್ತಿ ಲಭಿಸಿರುವುದು ಅತ್ಯಂತ ಅಭಿನಂದನಾರ್ಹ ಸಂಗತಿಯಾಗಿದೆ. ಗ್ರಾಮೀಣ ಭಾಗದ ಜನರ ಸೇವೆಗಾಗಿಯೇ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಟ್ವೀಟ್‌ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...