Wednesday, March 25, 2026
Wednesday, March 25, 2026

ಭರಮಸಾಗರದಲ್ಲಿ ಮಳೆ ಯದ್ವಾತದ್ವ ಸುರಿದು ಕೆರೆ ಏರಿ ಬಿರುಕು

Date:

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸತತ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ವರುಣನ ಅಬ್ಬರಕ್ಕೆ ಕೆರೆ- ಕಟ್ಟೆಗಳು ಉಕ್ಕಿ ಹರಿಯುತ್ತಿವೆ. ಇದರಿಂದ‌ ಜಿಲ್ಲೆಯ ಪ್ರಮುಖ ಬೆಳೆಗಳಾದ ಮೆಕ್ಕೆಜೋಳ, ಅಡಿಕೆ, ಜೋಳ, ರಾಗಿ ಬೆಳೆಗಳಿಗೆ ಅಪಾರ ಪ್ರಮಾಣದ ಹಾನಿ ಉಂಟಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ, ಸಿರಿಗೆರೆ, ವಿಜಾಪುರ, ಬಿದರಕೆರೆ ಸುತ್ತಮುತ್ತಲಿನ ಕೆರೆಯು ತುಂಬಿ ಕೊಡಿ ಮೂಲಕ ನೀರು ಹೋರಹೋಗುತ್ತಿದೆ. ಸಾವಿರಾರು ಎಕರೆ ಕೃಷಿ ಭೂಮಿಗೆ ನೀರು ನುಗ್ಗಿದೆ.

ಇದರಿಂದ ಕೊಯ್ಲಿಗೆ ಬಂದ ಮೆಕ್ಕೆಜೋಳ ಬೆಳೆ ಜಲಾವೃತವಾಗಿದೆ. ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇನ್ನೂ ಭರಮಸಾಗರ ಗ್ರಾಮದಲ್ಲಿ ಏತ ನೀರಾವರಿ ಯೋಜನೆ ಮೂಲಕ ನಿರ್ಮಾಣವಾಗಿರುವ ಬಿಚ್ಚುಗತ್ತಿ ಭರಮಣ್ಣ ನಾಯಕ ನಿರ್ಮಾಣ ಮಾಡಿರುವ ಸುಮಾರು 300 ವರ್ಷಕ್ಕಿಂತ ಹಿಂದಿನ ಹೆಸರಾಂತ 1000 ಎಕರೆ ವಿಸ್ತೀರ್ಣದ ದೊಡ್ಡ ಕೆರೆಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವ ಪರಿಣಾಮ ಕೆರೆಯ ಪ್ರಮುಖ ಏರಿ, ನೀರಿನ ಒತ್ತಡದಿಂದ ಬಿರುಕು ಬಿದ್ದ ಪರಿಣಾಮ ಸ್ಥಳೀಯ ಜನರ ಮತ್ತು ರೈತರ ಆತಂಕದ ಪರಿಣಾಮ ಭರಮಸಾಗರದ ಕೆರೆಯ ತಡೆಗೋಡೆ ಯನ್ನು ಸಡಿಲಿಸಿ ಹೆಚ್ಚಿನ ನೀರನ್ನು ಹೊರಗೆ ಬಿಡಲಾಗಿದೆ.

ಕೆರೆ ಏರಿಯಲ್ಲಿ ಕಾಣಿಸಿರುವ ಬಿರುಕನ್ನು ಸರಿಪಡಿಸಲಾಗಿತ್ತಿದೆ, ಬಿರುಕು ಬಿಟ್ಟಿರುವ ಏರಿಯ ಮೇಲೆ ವಾಹನ ಸಂಚಾರ ನಿಲ್ಲಿಸಲಾಗಿದೆ. ಹಿಂದೆ ಕಳಪೆ ರಸ್ತೆ ಕಾಮಗಾರಿ ಹಾಗೂ ಏತನೀರಾವರಿ ಯೋಜನೆಯಲ್ಲಿ ಅಪಾರ ಪ್ರಮಾಣದ ಹಣ ಖರ್ಚು ಮಾಡಿ ಕೆರೆಯನ್ನು ನವೀಕರಣ ಮಾಡಿದ ಸಂಧರ್ಭದಲ್ಲಿ ಏರಿಯ ಭದ್ರತೆ, ಸುರಕ್ಷತೆಗೆ ಸರಿಯಾದ ಮುತುವರ್ಜಿ ತೆಗೆದುಕೊಂಡು ನೀರನ್ನು ಹರಿಸಬೇಕಾಗಿತ್ತು. ಆದರೆ, ಆ ಕೆಲಸ ಮಾಡದೆ ನೀರನ್ನು ಹರಿಸಿದ ಪರಿಣಾಮ ಇಂದು ಈ ಸಮಸ್ಯೆ ಎದುರಿಸಬೇಕಾಗಿದೆ.

ಸಂತೋಷದ ವಿಚಾರ ಎಂದರೆ ಈಗ ಏರಿಯ ಭದ್ರತೆಗೆ ಗಮನ ಹರಿಸಿ ಕೆಲಸ ಮಾಡುತ್ತಿದ್ದಾರೆ, ನೋಡೋಣ ಇದು ಎಷ್ಟರ ಮಟ್ಟಿಗೆ ಸರಿಯಾಗುತ್ತದೆ, ಆ ಕೆಲಸಕ್ಕೆ ನಮ್ಮ ಭರಮಸಾಗರದ ಜನತೆ ರೈತರು ರಾಜಕೀಯ ಮುಖಂಡರು ಈ ಏರಿ ಭದ್ರತೆ ಕೆಲಸ ಮುಚ್ಚುತ್ತಾರೆ.

ಹಳ್ಳಿ ಹಳ್ಳಿಗಳ ನೀರಿನ ಕಾಲುವೆಯಲ್ಲಿ ಹರಿವು ಹೆಚ್ಚಾದ ಪರಿಣಾಮ ಹಳ್ಳಗಳು ತುಂಬಿ ಹರಿಯುತ್ತಿದೆ. ಅಪಾರ ಪ್ರಮಾಣ ನೀರು ರೈತರ ಜಮೀನಿಗೆ ನುಗ್ಗುತ್ತಿದೆ. ಮಳೆ ನೀರಿನಿಂದ ಭರಮಸಾಗರ ಹೋಬಳಿಯ, ಹಳ್ಳ ಉಕ್ಕಿ ಹರಿಯುತ್ತಿರುವ ಕಾರಣ ದೊಡ್ಡ ಮತ್ತು ಸಣ್ಣ ಕೆರೆಗಳ ಸುತ್ತಮುತ್ತಲಿನ ಜಮೀನು ಪೂರ್ಣವಾಗಿ ನೀರಾಗಿದೆ.

ಈ ಹಿಂದೆ ರೈತರು, ಭರಮಸಾಗರ ಜನರು ಅನೇಕ ರೀತಿಯ ಒತ್ತಡದಿಂದ ಕರ್ನಾಟಕ ನೀರಾವರಿ ನಿಗಮದ ಎಂಜಿನಿಯರ್‌ಗಳು ಕೆರೆ ಭಾಗಕ್ಕೆ ಭೇಟಿ ನೀಡಿ ದುರಸ್ತಿ ಕಾರ್ಯ ಮಸಡಿರುತ್ತಾರೆ ಆದರೆ ಅದು ಸರಿಯಾಗಿ ಸಮರ್ಪಕವಾಗಿ ಮಾಡದೆ ಮತ್ತೆ ಹೆಚ್ಚಿನ ಬಿರುಕು ಕಾಣಿಸಿಕೊಂಡಿದೆ ಮತ್ತೆ ಬಿರುಕಿಗೆ ಮಣ್ಣು ತುಂಬುವ ಕಾರ್ಯ ಪ್ರಾರಂಭವಾಗಿದೆ. ಎಷ್ಟರ ಮಟ್ಟಿಗೆ ಸರಿಯಾಗುತ್ತದೆ ಕಾದು ನೋಡಬೇಕಿದೆ.

ಅಡಿಕೆ, ತೆಂಗು ತೋಟ, ಕೊಯ್ಲಿಗೆ ಬಂದ ಮೆಕ್ಕೆಜೋಳ, ರಾಗಿ, ಜೋಳದ ಜಮೀನುಗಳು ಮುಳುಗಡೆಯಾಗಿವೆ, ಕೆರೆ ಕೋಡಿಗಳಿಂದ ನೀರು ಹರಿದು ತಗ್ಗು ಪ್ರದೇಶದಲ್ಲಿರುವ ಜಮೀನುಗಳು ಮುಳುಗಡೆಯಾಗಿದೆ.
ಇನ್ನೂ ರೈತರಿಗೆ ಆದ ಹಾನಿಯನ್ನು ಸರ್ಕಾರ ಯಾವರೀತಿ ಅವರ ಸಮಸ್ಯೆ ಬಗೆ ಹರಿಸುತ್ತದೆ ಕಾದು ನೋಡಬೇಕಿದೆ.

ವರದಿ ಕೃಪೆ:
ಮುರುಳೀಧರ್ ನಾಡಿಗೇರ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...