Thursday, March 19, 2026
Thursday, March 19, 2026

ಉಕ್ರೇನ್ ಜೊತೆ ಮಾತುಕತೆಗೆ ಸಿದ್ಧ-ಪುಟಿನ್

Date:

ಉಕ್ರೇನ್ ಮೇಲೆ ಬೃಹತ್ ಹೊಸ ದಾಳಿಗಳ ಅಗತ್ಯವಿಲ್ಲ. ರಷ್ಯಾ ದೇಶವನ್ನು ನಾಶಮಾಡಲು ನೋಡುತ್ತಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಹೇಳಿದರು.

ಕಝಾಕಿಸ್ತಾನ್‌ನಲ್ಲಿ ನಡೆದ ಶೃಂಗಸಭೆಯ ಕೊನೆಯಲ್ಲಿ ಪುಟಿನ್ ಸುದ್ದಿಗೋಷ್ಠಿಯಲ್ಲಿ, ರಷ್ಯಾದ ಮೀಸಲುದಾರರ ಕರೆ ಎರಡು ವಾರಗಳಲ್ಲಿ ಮುಗಿಯಲಿದೆ. ಮುಂದಿನ ದಿನಗಲ್ಲಿ ಸಜ್ಜುಗೊಳಿಸುವ ಯಾವುದೇ ಯೋಜನೆಗಳಿಲ್ಲ ಎಂದು ಹೇಳಿದರು.

ಉಕ್ರೇನ್ ಭಾಗವಹಿಸಲು ಸಿದ್ಧವಾಗಿದ್ದರೆ ಅವರಿಗೆ ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ಅಗತ್ಯವಿರುತ್ತದೆ. ಉಕ್ರೇನ್ ಜೊತೆ ಮಾತುಕತೆ ನಡೆಸಲು ರಷ್ಯಾ ಸಿದ್ಧವಾಗಿದೆ ಎಂಬ ಕ್ರೆಮ್ಲಿನ್ ನಿಲುವನ್ನು ಅವರು ಪುನರಾವರ್ತಿಸಿದರು.

ವಾರಗಳ ಉಕ್ರೇನಿಯನ್ ಪ್ರಗತಿ ಮತ್ತು ಗಮನಾರ್ಹ ರಷ್ಯಾದ ಸೋಲುಗಳು ಪುಟಿನ್ ಅವರನ್ನು ಕೊಂಚ ಮೇದುಗೊಳಿಸಿದೆ ಎಂದೇನಿಸುತ್ತದೆ. ಉಕ್ರೇನ್ ಮತ್ತು ರಷ್ಯಾದ ನಡುವೆ ನಡೆಯುತ್ತಿರುವ ಯುದ್ಧ 8 ನೇ ತಿಂಗಳಿಗೆ ಕಾಲಿಡುತ್ತಿದೆ.

ಕೆಲ ದಿನಗಳ ಹಿಂದೆ ರಷ್ಯಾದ ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಲು ಸಿದ್ಧ ಎಂದು ಹೇಳಿದ್ದ ಪುಟಿನ್ ,ರಷ್ಯಾದೊಂದಿಗೆ ನ್ಯಾಟೋ ಪಡೆಗಳ ನೇರ ಘರ್ಷಣೆಯ ಸಂದರ್ಭದಲ್ಲಿ ಜಾಗತಿಕ ದುರಂತದ ಬಗ್ಗೆಯೂ ಎಚ್ಚರಿಕೆ ನೀಡಿದ್ದರು.

ಫೆಬ್ರವರಿ 24ರಿಂದ ಉಕ್ರೇನ್, ರಷ್ಯಾದ ನಡುವೆ ಯುದ್ಧ ಪ್ರಾರಂಭದಿಂದಲೂ ಕೈವ್ ಮತ್ತು ಇತರ ಉಕ್ರೇನಿಯನ್ ನಗರಗಳ ಮೇಲೆ ರಷ್ಯಾ ತನ್ನ ಭಾರೀ ಕ್ಷಿಪಣಿ ದಾಳಿಯನ್ನು ನಡೆಸುತ್ತಿದೆ. ಕೆಲ ದಿನಗಳ ಹಿಂದೆ ಉಕ್ರೇನ್ ಕ್ರೈಮಿಯಾ ಸೇತುವೆ ಮೇಲೆ ದಾಳಿ ನಡೆಸಿತ್ತು. ಇದರಿಂದ ಕೋಪಗೊಂಡಿದ್ದ ಪುಟಿನ್ ಮರುದಿನ ಉಕ್ರೇನ್ ಮೇಲೆ ಬಹು ಕ್ಷಿಪಣಿ ದಾಳಿ ನಡೆಸಿದ್ದರು.

ಇದು ಕ್ರೈಮಿಯಾ ಸೇತುವೆ ಹಾನಿಗೊಳಗಾಗಿದ್ದಕ್ಕೆ ಪ್ರತಿಕಾರ ಎಂದು ಹೇಳಿದ್ದರು.

ನಾವು ಉಕ್ರೇನ್ ಅನ್ನು ನಾಶಮಾಡುವ ಉದ್ದೇಶ ಹೊಂದಿಲ್ಲ. ಖಂಡಿತ ಇಲ್ಲ ಪುಟಿನ್ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...