Monday, February 2, 2026
Monday, February 2, 2026

ಉಕ್ರೇನ್ ಜೊತೆ ಮಾತುಕತೆಗೆ ಸಿದ್ಧ-ಪುಟಿನ್

Date:

ಉಕ್ರೇನ್ ಮೇಲೆ ಬೃಹತ್ ಹೊಸ ದಾಳಿಗಳ ಅಗತ್ಯವಿಲ್ಲ. ರಷ್ಯಾ ದೇಶವನ್ನು ನಾಶಮಾಡಲು ನೋಡುತ್ತಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಹೇಳಿದರು.

ಕಝಾಕಿಸ್ತಾನ್‌ನಲ್ಲಿ ನಡೆದ ಶೃಂಗಸಭೆಯ ಕೊನೆಯಲ್ಲಿ ಪುಟಿನ್ ಸುದ್ದಿಗೋಷ್ಠಿಯಲ್ಲಿ, ರಷ್ಯಾದ ಮೀಸಲುದಾರರ ಕರೆ ಎರಡು ವಾರಗಳಲ್ಲಿ ಮುಗಿಯಲಿದೆ. ಮುಂದಿನ ದಿನಗಲ್ಲಿ ಸಜ್ಜುಗೊಳಿಸುವ ಯಾವುದೇ ಯೋಜನೆಗಳಿಲ್ಲ ಎಂದು ಹೇಳಿದರು.

ಉಕ್ರೇನ್ ಭಾಗವಹಿಸಲು ಸಿದ್ಧವಾಗಿದ್ದರೆ ಅವರಿಗೆ ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ಅಗತ್ಯವಿರುತ್ತದೆ. ಉಕ್ರೇನ್ ಜೊತೆ ಮಾತುಕತೆ ನಡೆಸಲು ರಷ್ಯಾ ಸಿದ್ಧವಾಗಿದೆ ಎಂಬ ಕ್ರೆಮ್ಲಿನ್ ನಿಲುವನ್ನು ಅವರು ಪುನರಾವರ್ತಿಸಿದರು.

ವಾರಗಳ ಉಕ್ರೇನಿಯನ್ ಪ್ರಗತಿ ಮತ್ತು ಗಮನಾರ್ಹ ರಷ್ಯಾದ ಸೋಲುಗಳು ಪುಟಿನ್ ಅವರನ್ನು ಕೊಂಚ ಮೇದುಗೊಳಿಸಿದೆ ಎಂದೇನಿಸುತ್ತದೆ. ಉಕ್ರೇನ್ ಮತ್ತು ರಷ್ಯಾದ ನಡುವೆ ನಡೆಯುತ್ತಿರುವ ಯುದ್ಧ 8 ನೇ ತಿಂಗಳಿಗೆ ಕಾಲಿಡುತ್ತಿದೆ.

ಕೆಲ ದಿನಗಳ ಹಿಂದೆ ರಷ್ಯಾದ ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಲು ಸಿದ್ಧ ಎಂದು ಹೇಳಿದ್ದ ಪುಟಿನ್ ,ರಷ್ಯಾದೊಂದಿಗೆ ನ್ಯಾಟೋ ಪಡೆಗಳ ನೇರ ಘರ್ಷಣೆಯ ಸಂದರ್ಭದಲ್ಲಿ ಜಾಗತಿಕ ದುರಂತದ ಬಗ್ಗೆಯೂ ಎಚ್ಚರಿಕೆ ನೀಡಿದ್ದರು.

ಫೆಬ್ರವರಿ 24ರಿಂದ ಉಕ್ರೇನ್, ರಷ್ಯಾದ ನಡುವೆ ಯುದ್ಧ ಪ್ರಾರಂಭದಿಂದಲೂ ಕೈವ್ ಮತ್ತು ಇತರ ಉಕ್ರೇನಿಯನ್ ನಗರಗಳ ಮೇಲೆ ರಷ್ಯಾ ತನ್ನ ಭಾರೀ ಕ್ಷಿಪಣಿ ದಾಳಿಯನ್ನು ನಡೆಸುತ್ತಿದೆ. ಕೆಲ ದಿನಗಳ ಹಿಂದೆ ಉಕ್ರೇನ್ ಕ್ರೈಮಿಯಾ ಸೇತುವೆ ಮೇಲೆ ದಾಳಿ ನಡೆಸಿತ್ತು. ಇದರಿಂದ ಕೋಪಗೊಂಡಿದ್ದ ಪುಟಿನ್ ಮರುದಿನ ಉಕ್ರೇನ್ ಮೇಲೆ ಬಹು ಕ್ಷಿಪಣಿ ದಾಳಿ ನಡೆಸಿದ್ದರು.

ಇದು ಕ್ರೈಮಿಯಾ ಸೇತುವೆ ಹಾನಿಗೊಳಗಾಗಿದ್ದಕ್ಕೆ ಪ್ರತಿಕಾರ ಎಂದು ಹೇಳಿದ್ದರು.

ನಾವು ಉಕ್ರೇನ್ ಅನ್ನು ನಾಶಮಾಡುವ ಉದ್ದೇಶ ಹೊಂದಿಲ್ಲ. ಖಂಡಿತ ಇಲ್ಲ ಪುಟಿನ್ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...