Wednesday, December 17, 2025
Wednesday, December 17, 2025

ಕಾನೂನಿಗೆ ಗೌರವ ನೀಡಿ ಬದುಕಬೇಕಿದೆ- ಪ್ರಸನ್ನ ಕರ್ಮಕರ್

Date:

ಕಾರ್ಕಳ ಕ್ರಿಯೇಟಿವ್‌ ಕಾಲೇಜಿನಲ್ಲಿ ಕಾನೂನು ಅರಿವು ಮತ್ತು ನಮಗೂ ಹಕ್ಕಿದೆ @75 ಕಾರ್ಯಕ್ರಮ
ನಮ್ಮ ದೇಶದ ಕಾನೂನು ಅತ್ಯಂತ ಪರಿಣಾಮಕಾರಿಯಾಗಿದ್ದು, ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ನ್ಯಾಯದ ಹಕ್ಕನ್ನು ನೀಡಿದೆ.

ಕಾನೂನಿನ ಅಡಿಯಲ್ಲಿ ಪ್ರತಿ ನಾಗರೀಕನೂ ಕಾನೂನಿಗೆ ತಲೆಬಾಗಿ ತನ್ನ ಸ್ವಾತಂತ್ರವನ್ನು ಅನುಭವಿಸಬೇಕು. ನಮ್ಮ ಹಕ್ಕುಗಳಿಗಾಗಿ ಹೋರಾಡಿ ನ್ಯಾಯಾಲಯದಲ್ಲಿ ನ್ಯಾಯ ಪಡೆಯುವ ವ್ಯವಸ್ಥೆಯೂ ಇದೆ. ಇದನ್ನು ದೇಶದ ನಾಗರೀಕರಾದ ನಾವೆಲ್ಲ ಅರ್ಥೈಸಿಕೊಂಡು ಕಾನೂನಿಗೆ ಗೌರವ ನೀಡಿ ಬದುಕಬೇಕಿದೆ ಎಂದು ವಕೀಲ ಶ್ರೀ. ಪ್ರಸನ್ನ ಕರ್ಮರ್ಕರ್‌ ಹೇಳಿದರು.

ಅವರು ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ನಮಗೂ ಹಕ್ಕಿದೆ @ 75 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ನಾವೆಲ್ಲ ಕಾನೂನು ಮತ್ತು ಸಂವಿಧಾನದ ಆಶಯವನ್ನು ಗೌರವಿಸೋಣ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥಾಪಕರಾದ ಅಶ್ವಥ್‌ ಎಸ್.ಎಲ್‌, ಗಣಪತಿ ಕೆ.ಎಸ್‌, ಸಾರ್ವಜನಿಕ ಸಂಪರ್ಕ ಅಧಿಕಾರಿ ಲಿಶಾನ್‌ ಗೌಡ, ಉಪನ್ಯಾಸಕರಾದ ರಾಘವೇಂದ್ರ ರಾವ್‌, ಉಮೇಶ್‌, ಅಕ್ಷತಾ ಜೈನ್‌, ಚಂದ್ರಕಾಂತ್‌ ಉಪಸ್ಥಿತರಿದ್ದರು.
ಶ್ರೀ. ಉಮೇಶ್‌ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...