Thursday, February 5, 2026
Thursday, February 5, 2026

ಕಾನೂನಿಗೆ ಗೌರವ ನೀಡಿ ಬದುಕಬೇಕಿದೆ- ಪ್ರಸನ್ನ ಕರ್ಮಕರ್

Date:

ಕಾರ್ಕಳ ಕ್ರಿಯೇಟಿವ್‌ ಕಾಲೇಜಿನಲ್ಲಿ ಕಾನೂನು ಅರಿವು ಮತ್ತು ನಮಗೂ ಹಕ್ಕಿದೆ @75 ಕಾರ್ಯಕ್ರಮ
ನಮ್ಮ ದೇಶದ ಕಾನೂನು ಅತ್ಯಂತ ಪರಿಣಾಮಕಾರಿಯಾಗಿದ್ದು, ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ನ್ಯಾಯದ ಹಕ್ಕನ್ನು ನೀಡಿದೆ.

ಕಾನೂನಿನ ಅಡಿಯಲ್ಲಿ ಪ್ರತಿ ನಾಗರೀಕನೂ ಕಾನೂನಿಗೆ ತಲೆಬಾಗಿ ತನ್ನ ಸ್ವಾತಂತ್ರವನ್ನು ಅನುಭವಿಸಬೇಕು. ನಮ್ಮ ಹಕ್ಕುಗಳಿಗಾಗಿ ಹೋರಾಡಿ ನ್ಯಾಯಾಲಯದಲ್ಲಿ ನ್ಯಾಯ ಪಡೆಯುವ ವ್ಯವಸ್ಥೆಯೂ ಇದೆ. ಇದನ್ನು ದೇಶದ ನಾಗರೀಕರಾದ ನಾವೆಲ್ಲ ಅರ್ಥೈಸಿಕೊಂಡು ಕಾನೂನಿಗೆ ಗೌರವ ನೀಡಿ ಬದುಕಬೇಕಿದೆ ಎಂದು ವಕೀಲ ಶ್ರೀ. ಪ್ರಸನ್ನ ಕರ್ಮರ್ಕರ್‌ ಹೇಳಿದರು.

ಅವರು ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ನಮಗೂ ಹಕ್ಕಿದೆ @ 75 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ನಾವೆಲ್ಲ ಕಾನೂನು ಮತ್ತು ಸಂವಿಧಾನದ ಆಶಯವನ್ನು ಗೌರವಿಸೋಣ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥಾಪಕರಾದ ಅಶ್ವಥ್‌ ಎಸ್.ಎಲ್‌, ಗಣಪತಿ ಕೆ.ಎಸ್‌, ಸಾರ್ವಜನಿಕ ಸಂಪರ್ಕ ಅಧಿಕಾರಿ ಲಿಶಾನ್‌ ಗೌಡ, ಉಪನ್ಯಾಸಕರಾದ ರಾಘವೇಂದ್ರ ರಾವ್‌, ಉಮೇಶ್‌, ಅಕ್ಷತಾ ಜೈನ್‌, ಚಂದ್ರಕಾಂತ್‌ ಉಪಸ್ಥಿತರಿದ್ದರು.
ಶ್ರೀ. ಉಮೇಶ್‌ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...