Thursday, March 26, 2026
Thursday, March 26, 2026

ಕಾಂತಾರ ಸಿನಿಮಾದ ಒಂದು ಕೋಟಿ ಟಿಕೆಟ್ ಮಾರಾಟ ದಾಖಲೆ

Date:

ಸ್ಯಾಂಡಲ್ ವುಡ್, ಬಾಲಿವುಡ್ ನಲ್ಲಿ ಹಲವು ದಾಖಲೆ ಬರೆಯುತ್ತ ಗಳಿಕೆಯಲ್ಲೂ ಕೋಟಿ‌ಕೋಟಿ ಬಾಚುತ್ತ ಹೋಗ್ತಿರೋ ಸಿನಿಮಾ ಕಾಂತಾರ ಈಗ ಹೊಸ ದಾಖಲೆ‌ಬರೆದಿದೆ. ಕರ್ನಾಟಕದಲ್ಲಿ ಒಂದು ಕೋಟಿ ಕಾಂತಾರಾ ಟಿಕೆಟ್ ಸೇಲ್ ಆಗಿದ್ದು ಈ ದಾಖಲೆ ವಿಚಾರವನ್ನು ಸ್ವತಃ ಹೊಂಬಾಳೆ ಮೂವಿಸ್ ಘೋಷಿಸಿದೆ.

ಸೆಪ್ಟೆಂಬರ್ 30 ರಂದು ತೆರೆಕಂಡ ಕಾಂತಾರ ಸಿನಿಮಾ ವಿಶ್ವದ ಸಿನಿಪ್ರೇಮಿಗಳನ್ನು ಸೆಳೆದಿದೆ. ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು ಎಲ್ಲ ಭಾಷೆಯಲ್ಲೂ ಹಲವು ಹೊಸ ದಾಖಲೆ ಬರೆಯುತ್ತ ಸಾಗಿದೆ.

ಬಾಲಿವುಡ್ ನಲ್ಲಿ ರಾಮಸೇತು ಸಿನಿಮಾವನ್ನು ಮೀರಿಸುವ ಗಳಿಕೆ ಕಾಣ್ತಿರೋ ಕಾಂತಾರ ಈಗ ಕನ್ನಡದಲ್ಲಿ ಹೊಸ ದಾಖಲೆ ಬರೆದಿದೆ. ಈ ವಿಚಾರವನ್ನು ಸ್ವತಃ ಕಾಂತಾರ ಸಿನಿಮಾದ ಮೇಕರ್ಸ್ ಹೊಂಬಾಳೆ ಮೂವಿಸ್ ಸೋಷಿಯಲ್ ಮೀಡಿಯಾದಲ್ಲಿ ಬಹಿರಂಗಪಡಿಸಿದೆ. ಕರ್ನಾಟಕದಲ್ಲಿ ಒಂದು ಕೋಟಿ ಟಿಕೇಟ್ಸ್ ಮಾರಾಟವಾಗಿದೆ ಎಂದು ಇಂಗ್ಲಿಷ್ ಮತ್ತು ಕನ್ನಡದಲ್ಲಿ ಹೊಂಬಾಳೆ ಫಿಲ್ಸ್ಮ್ ಪೋಸ್ಟರ್ ರಿಲೀಸ್ ಮಾಡಿದೆ.

ಸದ್ಯ ಸಿನಿಮಾ ರಿಲೀಸ್ ಆದ ಒಂದು ತಿಂಗಳ ಬಳಿಕವೂ ಕಾಂತಾರ ಯಶಸ್ವಿ ಪ್ರದರ್ಶನ ಮುಂದುವರೆಸಿದೆ. ಇದುವರೆಗೂ ಕಾಂತಾರ ಯಾವ ಯಾವ ದಾಖಲೆ ಮುರಿದಿದೆ ಅನ್ನೋದನ್ನು ಗಮನಿಸೋದಾದರೇ ಐದನೇ ವಾರದ ಪ್ರದರ್ಶನದಲ್ಲೇ ಕಾಂತಾರ ಬಾಹುಬಲಿ 2 ಆಫೀಸ್ ಗಳಿಕೆಯ ದಾಖಲೆಯನ್ನು ಮುರಿದಿದೆ. ಈಗ ಕರ್ನಾಟಕದಲ್ಲಿ ಇದುವರೆಗೂ ತೆರೆಕಂಡ ಸಿನಿಮಾಗಳ ಪೈಕಿ ಅತಿ‌ಹೆಚ್ಚು ಟಿಕೆಟ್ ಮಾರಾಟವಾದ ಸಿನಿಮಾ ಎಂಬ ಖ್ಯಾತಿಗೂ ಕಾಂತಾರ ಪಾತ್ರವಾಗಿದೆ. ಖ್ಯಾತ ನಿರ್ದೇಶಕ ರಾಜಮೌಳಿ ನಿರ್ದೇಶನದ ಬಾಹುಬಲಿ 2 ಸಿನಿಮಾ ಪ್ರದರ್ಶನದ ಐದನೇ ವಾರದಲ್ಲಿ 40 ಕೋಟಿ ಗಳಿಸಿತ್ತು. ಅದೇ ಕಾಂತಾರ ಸಿನಿಮಾ ಐದನೇ ವಾರದಲ್ಲಿ 65 ಕೋಟಿ ಗಳಿಸಿದೆ.

ಸದ್ಯ ಸಿನಿಮಾದ ನಾಯಕ ರಿಶಬ್ ಶೆಟ್ಟಿ ವಿಶ್ವದಾದ್ಯಂತ ಓಡಾಡಿಕೊಂಡು ಸಿನಿಮಾ ಪ್ರಮೋಶನ್ ನಲ್ಲಿ ತೊಡಗಿದ್ದು, ರಿಶಬ್ ಗೆ ಈಗಾಗಲೇ ಟಾಲಿವುಡ್ ಸೇರಿದಂತೆ ಬಾಲಿವುಡ್ ನಿಂದಲೂ ಸಿನಿಮಾ ಆಫರ್ ಬಂದಿದೆಯಂತೆ. ಆದರೆ ಸದ್ಯ ರಿಶಬ್ ಬೇರೆ ಭಾಷೆಯ ಸಿನಿಮಾಗಳನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದು ಕನ್ನಡದಲ್ಲೇ ಇನ್ನಷ್ಟು ಸಿನಿಮಾಗಳನ್ನು ನಿರ್ಮಿಸಲು ಚಿಂತನೆ ನಡೆಸಿರೋದಾಗಿ ಹೇಳಿಕೊಂಡಿದ್ದಾರೆ. ಒಟ್ಟಿನಲ್ಲಿ ನಟ ಹಾಗೂ ನಿರ್ದೇಶಕ ರಿಶಬ್ ಶೆಟ್ಟಿ ಕಾಂತಾರ ಕಂತೆ ಕಂತೆ ದಾಖಲೆಗಳ ಜೊತೆ ಮುಂದೇ ಸಾಗುತ್ತಿದ್ದು, ಚಿತ್ರತಂಡಸ ಸಂಭ್ರಮ ದುಪ್ಪಟ್ಟಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...