Sunday, May 24, 2026
Sunday, May 24, 2026

ನಿತ್ಯ ಒಂದು ತಾಸು ಹೆಚ್ಚಿಗೆ ಕೆಲಸಮಾಡಿ- ಬೊಮ್ಮಾಯಿ

Date:

ಪ್ರತಿ ದಿನ ಒಂದು ತಾಸು ಹೆಚ್ಚಿಗೆ ಕೆಲಸ ಮಾಡಿ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರಿ ನೌಕರರಿಗೆ ಕರೆ ನೀಡಿದರು.

ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7 ನೇ ವೇತನ ಆಯೋಗ ರಚನೆ ಮಾಡಿರುವುದಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ನೇತೃತ್ವದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರುಗಳ ನಿಯೋಗವು ಇಂದು ಮುಖ್ಯ ಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿ, ಕೆಳಹಂತದವರೆಗೆ ಈ ಕೆಲಸ ಆಗಬೇಕು.

ಮುಂದಿನ ಕೆಲಸಗಳನ್ನು ನನಗೆ ಬಿಡಿ. ಎಲ್ಲರೂ ಒಂದಾಗಿ ಸುಭಿಕ್ಷ ನಾಡನ್ನು ಕಟ್ಟೋಣ. ಪ್ರಾಮಾಣಿಕತೆ, ನಿಷ್ಠೆ ಹಾಗು ಕರ್ತವ್ಯ ಪ್ರಜ್ಞೆಯಿಂದ ಕೆಲಸ ಮಾಡಿ. ಬಡವರಿಗೆ, ಜನಪರವಾದ ಕೆಲಸ ಮಾಡಿದರೆ ಕರ್ನಾಟಕ ಅಭಿವೃದ್ಧಿಯಾಗುತ್ತದೆ. ನವ ಕರ್ನಾಟಕ ದಿಂದ ನವ ಭಾರತ ನಿರ್ಮಿಸೋಣ ಎಂದರು. ದೇಶದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಕನಸಿಗೆ ಕರ್ನಾಟಕ ಒಂದು ಟ್ರಿಲಿಯನ್ ಡಾಲರ್ ಕೊಡುಗೆ ನೀಡಬೇಕು ಎಂದರು.

ಕರ್ನಾಟಕದಲ್ಲಿ ವೇತನ ಆಯೋಗವನ್ನು ಐದು ವರ್ಷವಾದ ಕೂಡಲೇ ಘೋಷಣೆಯಾಗಿರುವುದು ನಮ್ಮ ಸರ್ಕಾರದ ಅವಧಿಯಲ್ಲಿ ಎಂದರು.

ವರ್ಷದಿಂದ ವರ್ಷಕ್ಕೆ ಹಣದುಬ್ಬರ ಹೆಚ್ಚಾಗುತ್ತದೆ. ಸರ್ಕಾರಿ ನೌಕರರಾಗಿ ಸೇವೆಗೆ ಸೇರಿದ ಸಂದರ್ಭಕ್ಕೂ ಈಗಿನ ಸಂದರ್ಭಕ್ಕೂ ವ್ಯತ್ಯಾಸ ವಿರುತ್ತದೆ. ಸಮಯ ಮತ್ತು ಹಣ ಎರಡೂ ಬಹಳ ಮುಖ್ಯ. ಸರಿಯಾದ ಸಮಯದಲ್ಲಿ ಸರಿಯಾದ ಸಂಪಾದನೆಯಾದರೆ ಬದುಕಿಗೆ ಪ್ರೇರಣೆ. ಅದಕ್ಕಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಬಿ.ಎಸ್.ಯಡಿಯೂರಪ್ಪ ಅವರು ಕೂಡ ಇದಕ್ಕೆ ಒತ್ತಾಸೆಯಾಗಿದ್ದರು. ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರೂ ಒತ್ತಾಯ ಮಾಡಿದ್ದರು ಎಂದರು.

ಅತ್ಯಂತ ಪ್ರಾಮಾಣಿಕ, ನಿಷ್ಠಾವಂತ ಅಧಿಕಾಯಾಗಿದ್ದ ಡಾ: ಸುಧಾಕರ್ ರಾವ್ ದಕ್ಷತೆಯಿಂದ ಕೆಲಸ ಮಾಡಿದವರು. ಪ್ರಭಾವಕ್ಕೆ ಮಣಿಯದವರು.

ನ್ಯಾಯಸಮ್ಮತವಾದ 7 ನೇ ವೇತನ ಆಯೋಗದ ವರದಿ ಬರಲಿ ಎಂದು ಶುದ್ಧಹಸ್ತ, ಶುದ್ಧ ಅಂತ:ಕರಣವುಳ್ಳ ಸುಧಾಕರ್ ರಾವ್ ಅವರ ಆಯ್ಕೆ ಆಗಿದೆ ಎಂದರು. ಇದಕ್ಕೆ ನೌಕರರ ಸಹಕಾರ ಕೂಡ ಅಗತ್ಯ. ಇದನ್ನು ಸಕಾರಗೊಳಿಸಿ ಎಲ್ಲರಿಗೂ ಒಳ್ಳೆಯದು ಆಗಬೇಕು. ಚಿಂತೆ ಮಾಡಬೇಡಿ. ಮುಂದಿನ ಸರ್ಕಾರ ನಮ್ಮದೇ ಬರಲಿದೆ. ಇದರ ಅನುಷ್ಠಾನ ನಾವೇ ಮಾಡುತ್ತೇವೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...