Friday, May 8, 2026
Friday, May 8, 2026

ವಶಪಡಿಸಿದ ವಾಹನ ಠಾಣೆಯ ಮುಂದೆ ನಿಲ್ಲಿಸದೇ ಶ್ಯೂರಿಟಿ ಪಡೆದು ಕಳಿಸಿ

Date:

ಅಪರಾಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ವಾಹನಗಳನ್ನು ಅನಗತ್ಯವಾಗಿ ಪೊಲೀಸ್ ಠಾಣೆಯ ಮುಂದೆ ನಿಲ್ಲಿಸಿಕೊಳ್ಳಬೇಡಿ. ಬದಲಿಗೆ ಶ್ಯೂರಿಟಿ ಪಡೆದು ಬಿಡುಗಡೆ ಮಾಡಿ ಎಂದು ಹೈಕೋರ್ಟ್ ಸೂಚಿಸಿದೆ.

ವಾಹನ ಬಿಡುಗಡೆ ಮಾಡಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಜವ್ವಾಜಿ ಧನತೇಜ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.
ಕೆ. ನಟರಾಜನ್ ಅವರಿದ್ದ ಪೀಠ ಈ ನಿರ್ದೇಶನ ನೀಡಿದೆ.
ಪೀಠ ತನ್ನ ಆದೇಶದಲ್ಲಿ, ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ವಶಪಡಿಸಿಕೊಂಡ ವಾಹನಗಳನ್ನು ವಿನಾಕಾರಣ ಪೊಲೀಸ್ ಠಾಣೆಯ ಮುಂದೆ ನಿಲ್ಲಿಸಿಕೊಳ್ಳುವುದರಿಂದ ಯಾವುದೇ ಪ್ರಯೋಜನವಿಲ್ಲ.

ಹಲವು ವರ್ಷಗಳ ಕಾಲ ಠಾಣೆಯ ಮುಂದೆ ನಿಲ್ಲುವ ವಾಹನಗಳು ನಿಧಾನವಾಗಿ ಹಾಳಾಗುತ್ತವೆ. ದಿನ ಕಳೆದಂತೆ ಅವುಗಳನ್ನು ಗುರುತಿಸುವುದಕ್ಕೂ ಸಾಧ್ಯವಾಗದು ಮತ್ತು ನ್ಯಾಯಾಲಯಕ್ಕೆ ತರಲಿಕ್ಕೂ ಆಗದ ಸ್ಥಿತಿ ತಲುಪುತ್ತವೆ.
ಆದ್ದರಿಂದ ಸುಪ್ರೀಂ ಕೋರ್ಟ್ ಸುಂದರ್ ಬಾಯ್ ಅಂಬಲಾಲ್ ವರ್ಸಸ್ ಗುಜರಾತ್ ಸರ್ಕಾರ ಪ್ರಕರಣದಲ್ಲಿ ನೀಡಿರುವ ನಿರ್ದೇಶನಗಳ ಅನ್ವಯ ವಾಹನಗಳನ್ನು ಅವುಗಳ ಮಾಲಿಕರಿಗೆ ಬಾಂಡ್ ಪಡೆದುಕೊಳ್ಳುವುದು ಸೇರಿದಂತೆ ಅಗತ್ಯ ಷರತ್ತುಗಳನ್ನು ವಿಧಿಸುವ ಮೂಲಕ ಹಿಂದಿರುಗಿಸಬೇಕು.

ಅಲ್ಲದೇ, ವಾಹನ ಬಿಡುಗಡೆಗೂ ಮುನ್ನ ಪಂಚರ ಸಮಕ್ಷಮದಲ್ಲಿ ವಿವಿಧ ಕೋನಗಳಲ್ಲಿ ವಾಹನದ ಫೋಟೋಗಳನ್ನು ಚಿತ್ರಿಸಿಕೊಳ್ಳಬೇಕು. ಈ ಫೋಟೋಗಳನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...