Sunday, June 28, 2026
Sunday, June 28, 2026

ದಯಾಮರಣ ಕೋರಿ ಸಾಗರ ತಾಲೂಕಿನ ದಂಪತಿಗಳು ರಾಷ್ಟ್ರಪತಿಗೆ ಮನವಿ

Date:

ಇಬ್ಬರು ದಂಪತಿಗಳು ಸರ್ಕಾರಿ ಅಧಿಕಾರಿಗಳ ಕಿರುಕುಳಕ್ಕೆ ಮನನೊಂದು ನಮಗೆ ದಯಾಮರಣ ನೀಡುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪತ್ರ ಬರೆದಿದ್ದಾರೆ.

ಈ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಖಂಡಿಕಾಯಲ್ಲಿ ನಡೆದಿದೆ. ಅಧಿಕಾರಿಗಳ ಲಂಚಬಾಕತನಕ್ಕೆ ಬೇಸತ್ತು ದಯಾಮರಣಕ್ಕೆ ಅರ್ಜಿಯನ್ನು ಸಲ್ಲಿಸಿದ್ದೇವೆ ಎಂದು ದಂಪತಿಗಳು ಹೇಳಿದ್ದಾರೆ.

ಶ್ರೀಕಾಂತ್ ನಾಯ್ಕ್-ಸುಜಾತ ನಾಯ್ಕ್ ದಂಪತಿಗಳಿಗೆ ಸಂಬಂಧಿಸಿದ ಜಮೀನಿನಲ್ಲಿ‌ರುವ ಸೈಟ್​ಗಳ ಅಭಿವೃದ್ಧಿಗೆ ಅನುಮೋದನೆ ಮತ್ತು ನಿವೇಶನಗಳ ಅಭಿವೃದ್ಧಿಗೆ ಲಂಚ ನೀಡುವಂತೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ಗ್ರಾಮ ಪಂಚಾಯತಿಗೆ ಶುಲ್ಕ ನೀಡಿ ಅನುಮೋದನೆಗೆ ಮನವಿ ಮಾಡಿದ್ದೇವು, ಆದರೆ ಶುಲ್ಕ ನೀಡಿದರೂ ಅಧಿಕಾರಿಗಳು 3-4 ಬಾರಿ ಅಲೆದಾಡಿಸಿದ್ದಾರೆ, ಪ್ರತಿದಿನ ಸರ್ಕಾರಿ ಕಚೇರಿ ಮುಂದೆ ನಿಂತು ನಿಂತು ಸಾಕಾಗಿದೆ. ಇದೀಗ ಪಿಡಿಒ 5 ಲಕ್ಷ ಹಣ ಹಾಗೂ ತಾ.ಪಂ. ಇಒ 10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಇಷ್ಟೊಂದು ಹಣವನ್ನು ನಾವು ಎಲ್ಲಿಂದ ತರಬೇಕು, ಅನೇಕ ಬಾರಿ ಈ ಬಗ್ಗೆ ದೂರು ನೀಡದರು ಯಾವುದೇ ಪ್ರಯೋಜನ ಆಗಿಲ್ಲ ಎಂದು ಹೇಳಿದ್ದಾರೆ.

ಇಬ್ಬರು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಪಿಡಿಒ, ತಾ.ಪಂ. ಇಒ ವಿರುದ್ಧ ಶ್ರೀಕಾಂತ್ ದಂಪತಿಗಳು ಆರೋಪಿಸಿದ್ದಾರೆ. ಅಧಿಕಾರಿಗಳ ಲಂಚಬಾಕತನಕ್ಕೆ ಬೇಸತ್ತು ದಯಾಮರಣ ನೀಡುವಂತೆ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ್ದೇವೆ ಎಂದ ಶ್ರೀಕಾಂತ್​ ದಂಪತಿಗಳು ಹೇಳಿದ್ದಾರೆ.

ಅಧಿಕಾರಿಗಳು ಅಷ್ಟೊಂದು ಮೊತ್ತದ ಹಣಕ್ಕೆ ಬೇಡಿಕೆ ಇಟ್ಟರೆ, ಬಡ ಕುಟುಂಬಗಳು ಏನು ಮಾಡಬೇಕು. ಈ ಕಾರಣಕ್ಕೆ ನಾವು ದಯಾಮರಣ ನೀಡುವಂತೆ ರಾಷ್ಟ್ರಪತಿಗೆ ಪತ್ರ ಬರೆದಿದ್ದೇವೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಾದಕ ವಸ್ತುಗಳ ಸಾಗಾಣೆ ಮತ್ತು ಬಳಕೆ ನಿಯಂತ್ರಣಕ್ಕೆ ಪೊಲೀಸ್‌ ಇಲಾಖೆ ದಿಟ್ಟಕ್ರಮ : ಬಿ.ನಿಖಿಲ್

ಶಿವಮೊಗ್ಗ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಸಾಗಾಣೆ,...

B.Y. Raghavendra ಶ್ರೀ ಕೆಂಪೇಗೌಡರು ದೂರದೃಷ್ಟಿಯಿಂದ ನಾಡನ್ನು‌ ಕಟ್ಟಿ ಮಾದರಿಯಾಗಿದ್ದಾರೆ : ಬಿ.ವೈ.ರಾಘವೇಂದ್ರ

B.Y. Raghavendra ನಾಡಪ್ರಭು ಶ್ರೀ ಕೆಂಪೇಗೌಡರು ಓರ್ವ ದಕ್ಷ ಆಡಳಿತಗಾರ, ಅಪ್ರತಿಮ...