Monday, December 15, 2025
Monday, December 15, 2025

500 ಜನೌಷಧ ಮಳಿಗೆ ತೆರೆಯಲು ಸರ್ಕಾರದ ಪ್ರಸ್ತಾವನೆ-ಡಾ.ಸುಧಾಕರ್

Date:

ಬಡ, ಹಿಂದುಳಿದ ಮತ್ತು ಮಧ್ಯಮ ವರ್ಗದವರಿಗೆ ರಿಯಾಯಿತಿ ದರದಲ್ಲಿ ಔಷಧ ಹಾಗೂ ಶಸ್ತ್ರ ಚಿಕಿತ್ಸಾ ಪರಿಕರಗಳು ಲಭ್ಯವಾಗುವ ಜನೌಷಧ ಮಳಿಗೆಗಳು ಇನ್ನಷ್ಟು ತೆರೆಯಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ಕೇಳಿ ಬರುತ್ತಿತ್ತು.

ಇದೀಗ ಸರ್ಕಾರ ಇದಕ್ಕೆ ಸೂಕ್ತವಾಗಿ ಸ್ಪಂದಿಸಿದೆ. ರಾಜ್ಯದಲ್ಲಿ ಹೊಸದಾಗಿ 500 ಜನೌಷಧ ಮಳಿಗೆಗಳನ್ನು ತೆರೆಯಲು ಚಿಂತನೆ ನಡೆಸಿದೆ.

ಅಲ್ಲದೆ ಸರ್ಕಾರಿ ಆಸ್ಪತ್ರೆಗಳಲ್ಲಿ 40 ಮಳಿಗೆ ತೆರೆಯಲು ಅನುಮತಿ ನೀಡುವಂತೆ ಕೋರಿ ಭಾರತೀಯ ಔಷಧ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದೆ. ಜನೌಷಧ ಮಳಿಗೆ ಸ್ಥಾಪನೆ ವಿಚಾರದಲ್ಲಿ ಉತ್ತರ ಪ್ರದೇಶ ನಂತರದ ಸ್ಥಾನದಲ್ಲಿ ಕರ್ನಾಟಕವಿದೆ. ಈ ವರ್ಷದ ಫೆಬ್ರವರಿ ನಂತರ 300 ಮಳಿಗೆಗಳನ್ನು ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಜನೌಷಧ ಮಳಿಗೆಗಳಲ್ಲಿ ಮಾರುಕಟ್ಟೆ ದರಕ್ಕಿಂತ ಶೇಕಡ 50 ರಿಂದ ಶೇಕಡ 80ರಷ್ಟು ಅಗ್ಗದ ದರದಲ್ಲಿ ದೊರೆಯುತ್ತಿದೆ. ಒಟ್ಟು 1,451 ಔಷಧಿಗಳು ಹಾಗೂ 240 ಶಸ್ತ್ರ ಚಿಕಿತ್ಸಾ ಪರಿಕರಗಳು ಜೊತೆಗೆ ದುಬಾರಿ ವೆಚ್ಚದ ಕ್ಯಾನ್ಸರ್ ಔಷಧಿಗಳು ಸಹ ಇಲ್ಲಿ ದೊರೆಯುತ್ತಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...