Monday, December 15, 2025
Monday, December 15, 2025

ತುರ್ತು ಚಿಕಿತ್ಸೆಗೆ ನೆರವಾಗಿ ಜೀವವುಳಿಸಿದ ಸಾಕುನಾಯಿ

Date:

ನಿಯತ್ತಿಗೆ ಇನ್ನೊಂದು ಹೆಸರೇ ನಾಯಿ. ಈಗ ಹೇಳು ಹೊರಟಿರುವ ವಿಷಯವು ಕೂಡ ಇದಕ್ಕೆ ಸಂಬಂಧಿಸಿದ್ದೆ…
ಇದೊಂದು ಮನ ಮಿಡಿಯುವ ವಿಷಯ.

ಕಟ್ಟಿಗೆ ತರಲು ಕಾಡಿಗೆ ಹೋದ ವ್ಯಕ್ತಿಯೊಬ್ಬ ನಿರ್ಜನ ಪ್ರದೇಶದಲ್ಲಿ ತಲೆ ಸುತ್ತಿ ಬಿದ್ದಿದ್ದಾನೆ. ಈ ಸಂದರ್ಭದಲ್ಲಿ ತನ್ನ ಸಾಕು ನಾಯಿಯಿಂದ ಈತ ಪತ್ತೆಯಾಗಿದ್ದಾನೆ.

ಈ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೂಡೂರಿನಲ್ಲಿ ನಡೆದಿದೆ.

ಈ ಊರಿನ ಶೇಖರಪ್ಪ ಎಂಬಾತ ಆಯನೂರಿನ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ. ಬೆಳಗ್ಗೆ ಸುಮಾರು 6 ಗಂಟೆಗೆ ಕಟ್ಟಿಗೆ ತರುವುದಕ್ಕೆ ಕಾಡಿಗೆ ಹೋಗಿದ್ದಾರೆ. ಸುಮಾರು 10 ಗಂಟೆಗೆ ಮನೆಗೆ ವಾಪಸ್ಸಾಗುತ್ತಿದ್ದವರು ಎಷ್ಟೊತ್ತಾದರೂ ಮನೆಗೆ ಬಂದಿಲ್ಲ. ಆದ್ದರಿಂದ, ಮನೆಯವರು ಊರಿನ ಒಂದಿಷ್ಟು ಜನರಿಗೆ ವಿಚಾರ ತಿಳಿಸಿದ್ದಾರೆ. ಊರಿನವರು ಈತನನ್ನು ಹುಡುಕಲು ಕಾಡಿಗೆ ಹೋಗಿದ್ದಾರೆ. ಕಾಡಿನಲ್ಲಿ ಎಷ್ಟು ಹುಡುಕಿದರು ಶೇಖರಪ್ಪನ ಸುಳಿವು ಸಿಗಲೇ ಇಲ್ಲ.

ಆದರೆ, ಈತ ಸಾಕಿದ್ದ ನಾಯಿಯೊಂದು ಶೇಖರಪ್ಪ ಇರುವ ಜಾಗ ಪತ್ತೆ ಹಚ್ಚಿದೆ. ಸುಮಾರು 4 ಗಂಟೆ ಸುಮಾರಿಗೆ ಶೇಖರಪ್ಪ ಇರುವ ಜಾಗಕ್ಕೆ ಊರಿನವರನ್ನು ಕರೆ ತಂದಿದೆ.
ತಕ್ಷಣವೇ ಶೇಖರಪ್ಪನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಈ ನಾಯಿ ಪ್ರತಿನಿತ್ಯ ಮಾಲೀಕನ ಜೊತೆಯಲ್ಲಿ ಹೋಗುತ್ತಿತ್ತಂತೆ. ಹಾಗಾಗಿಯೇ ಶೇಖರಪ್ಪನನ್ನು ಪತ್ತೆ ಮಾಡಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...