Monday, May 4, 2026
Monday, May 4, 2026

ತುರ್ತು ಚಿಕಿತ್ಸೆಗೆ ನೆರವಾಗಿ ಜೀವವುಳಿಸಿದ ಸಾಕುನಾಯಿ

Date:

ನಿಯತ್ತಿಗೆ ಇನ್ನೊಂದು ಹೆಸರೇ ನಾಯಿ. ಈಗ ಹೇಳು ಹೊರಟಿರುವ ವಿಷಯವು ಕೂಡ ಇದಕ್ಕೆ ಸಂಬಂಧಿಸಿದ್ದೆ…
ಇದೊಂದು ಮನ ಮಿಡಿಯುವ ವಿಷಯ.

ಕಟ್ಟಿಗೆ ತರಲು ಕಾಡಿಗೆ ಹೋದ ವ್ಯಕ್ತಿಯೊಬ್ಬ ನಿರ್ಜನ ಪ್ರದೇಶದಲ್ಲಿ ತಲೆ ಸುತ್ತಿ ಬಿದ್ದಿದ್ದಾನೆ. ಈ ಸಂದರ್ಭದಲ್ಲಿ ತನ್ನ ಸಾಕು ನಾಯಿಯಿಂದ ಈತ ಪತ್ತೆಯಾಗಿದ್ದಾನೆ.

ಈ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೂಡೂರಿನಲ್ಲಿ ನಡೆದಿದೆ.

ಈ ಊರಿನ ಶೇಖರಪ್ಪ ಎಂಬಾತ ಆಯನೂರಿನ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ. ಬೆಳಗ್ಗೆ ಸುಮಾರು 6 ಗಂಟೆಗೆ ಕಟ್ಟಿಗೆ ತರುವುದಕ್ಕೆ ಕಾಡಿಗೆ ಹೋಗಿದ್ದಾರೆ. ಸುಮಾರು 10 ಗಂಟೆಗೆ ಮನೆಗೆ ವಾಪಸ್ಸಾಗುತ್ತಿದ್ದವರು ಎಷ್ಟೊತ್ತಾದರೂ ಮನೆಗೆ ಬಂದಿಲ್ಲ. ಆದ್ದರಿಂದ, ಮನೆಯವರು ಊರಿನ ಒಂದಿಷ್ಟು ಜನರಿಗೆ ವಿಚಾರ ತಿಳಿಸಿದ್ದಾರೆ. ಊರಿನವರು ಈತನನ್ನು ಹುಡುಕಲು ಕಾಡಿಗೆ ಹೋಗಿದ್ದಾರೆ. ಕಾಡಿನಲ್ಲಿ ಎಷ್ಟು ಹುಡುಕಿದರು ಶೇಖರಪ್ಪನ ಸುಳಿವು ಸಿಗಲೇ ಇಲ್ಲ.

ಆದರೆ, ಈತ ಸಾಕಿದ್ದ ನಾಯಿಯೊಂದು ಶೇಖರಪ್ಪ ಇರುವ ಜಾಗ ಪತ್ತೆ ಹಚ್ಚಿದೆ. ಸುಮಾರು 4 ಗಂಟೆ ಸುಮಾರಿಗೆ ಶೇಖರಪ್ಪ ಇರುವ ಜಾಗಕ್ಕೆ ಊರಿನವರನ್ನು ಕರೆ ತಂದಿದೆ.
ತಕ್ಷಣವೇ ಶೇಖರಪ್ಪನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಈ ನಾಯಿ ಪ್ರತಿನಿತ್ಯ ಮಾಲೀಕನ ಜೊತೆಯಲ್ಲಿ ಹೋಗುತ್ತಿತ್ತಂತೆ. ಹಾಗಾಗಿಯೇ ಶೇಖರಪ್ಪನನ್ನು ಪತ್ತೆ ಮಾಡಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...